ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಸಭೆಯಲ್ಲಿ ಪ್ರಾಂಶುಪಾಲರಾದ ಡಾ.ಡಿ ರವಿ ಅವರು ಮಾತನಾಡುತ್ತಿರುವುದು
ಮೈಸೂರು : ಇತ್ತೀಚೆಗೆ ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಭೆ ನಡೆಯಿತು.
ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಟ್ಟಡ ಕುಸಿದುಬಿದ್ದಿತ್ತು. ಆದ ಕಾರಣ ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿತ್ತು.
ಆತಂಕ ದೂರ ಮಾಡುವ ಸಲುವಾಗಿ ಸಭೆ ಕರೆಯಲಾಗಿತ್ತು.
ಕುಸಿದ ಪಾರಂಪರಿಕ ಕಟ್ಟಡದಲ್ಲಿ ಪ್ರಯೋಗಶಾಲೆ ಮತ್ತು ಕೆಲವು ತರಗತಿಗಳು ನಡೆಯುತ್ತಿದ್ದವು. ಸದರಿ ತರಗತಿಗಳನ್ನು ಪಕ್ಕದಲ್ಲೇ ಇರುವ ಹೊಸ ಕಟ್ಟಡದಲ್ಲಿ ನಡೆಸಲಾಗುತ್ತದೆ. ತರಗತಿಗಳು ಯಾವ ತೊಂದರೆಯೂ ಇಲ್ಲದೆ ನಡಯಲಿವೆ ಎಂದು ಪ್ರಾಂಶುಪಾಲರಾದ ಡಾ.ಡಿ.ರವಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಲೋಕೋಪಯೋಗಿ ಇಲಾಖೆಯ ಇಂಜಿನಿಯರುಗಳ ತಂಡ ಕಾಲೇಜಿನ ಪಾರಂಪರಿಕ ಕಟ್ಟಡವನ್ನು ಪರಿಶೀಲನೆ ನಡೆಸಿದ್ದು ಇನ್ನು ಕೆಲವೇ ದಿನಗಳಲ್ಲಿ ವರದಿ ನೀಡಲಿದ್ದಾರೆ. ಆ ನಂತರ ಮುಂದಿನ ಕ್ರಮವನ್ನು ಇಲಾಖೆ ತೆಗೆದುಕೊಳ್ಳಲಿದೆ ಎಂದ ಅವರು
ಗಾಳಿಸುದ್ದಿ ನಂಬದಿರುವಂತೆ ಹಾಗು ಕುತೂಹಲಕ್ಕೂ ಕುಸಿದು ಬಿದ್ದಿರುವ ಕಟ್ಟಡದ ಬಳಿ ಹೋಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅಧ್ಯಾಪಕರು, ಕಛೇರಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…