ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಸಭೆಯಲ್ಲಿ ಪ್ರಾಂಶುಪಾಲರಾದ ಡಾ.ಡಿ ರವಿ ಅವರು ಮಾತನಾಡುತ್ತಿರುವುದು
ಮೈಸೂರು : ಇತ್ತೀಚೆಗೆ ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಭೆ ನಡೆಯಿತು.
ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಟ್ಟಡ ಕುಸಿದುಬಿದ್ದಿತ್ತು. ಆದ ಕಾರಣ ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿತ್ತು.
ಆತಂಕ ದೂರ ಮಾಡುವ ಸಲುವಾಗಿ ಸಭೆ ಕರೆಯಲಾಗಿತ್ತು.
ಕುಸಿದ ಪಾರಂಪರಿಕ ಕಟ್ಟಡದಲ್ಲಿ ಪ್ರಯೋಗಶಾಲೆ ಮತ್ತು ಕೆಲವು ತರಗತಿಗಳು ನಡೆಯುತ್ತಿದ್ದವು. ಸದರಿ ತರಗತಿಗಳನ್ನು ಪಕ್ಕದಲ್ಲೇ ಇರುವ ಹೊಸ ಕಟ್ಟಡದಲ್ಲಿ ನಡೆಸಲಾಗುತ್ತದೆ. ತರಗತಿಗಳು ಯಾವ ತೊಂದರೆಯೂ ಇಲ್ಲದೆ ನಡಯಲಿವೆ ಎಂದು ಪ್ರಾಂಶುಪಾಲರಾದ ಡಾ.ಡಿ.ರವಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಲೋಕೋಪಯೋಗಿ ಇಲಾಖೆಯ ಇಂಜಿನಿಯರುಗಳ ತಂಡ ಕಾಲೇಜಿನ ಪಾರಂಪರಿಕ ಕಟ್ಟಡವನ್ನು ಪರಿಶೀಲನೆ ನಡೆಸಿದ್ದು ಇನ್ನು ಕೆಲವೇ ದಿನಗಳಲ್ಲಿ ವರದಿ ನೀಡಲಿದ್ದಾರೆ. ಆ ನಂತರ ಮುಂದಿನ ಕ್ರಮವನ್ನು ಇಲಾಖೆ ತೆಗೆದುಕೊಳ್ಳಲಿದೆ ಎಂದ ಅವರು
ಗಾಳಿಸುದ್ದಿ ನಂಬದಿರುವಂತೆ ಹಾಗು ಕುತೂಹಲಕ್ಕೂ ಕುಸಿದು ಬಿದ್ದಿರುವ ಕಟ್ಟಡದ ಬಳಿ ಹೋಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅಧ್ಯಾಪಕರು, ಕಛೇರಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…