ಜಿಲ್ಲೆಗಳು

ಶಾಲಾ ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಪಾಲಿಸಬೇಕು: ಎಎಸ್‌ಐ ವೆಂಕಟೇಶ್

ಮೈಸೂರು: ಶಾಲಾ ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳು ಸಂಚಾರ ಹಾಗೂ ಸರ್ಕಾರದ ನಿಯಮಗಳನ್ನು ಪಾಲಿಸುವುದನ್ನು ಕಲಿಯಬೇಕು. ಇಲ್ಲವಾದರೆ ಭವಿಷ್ಯದಲ್ಲಿ ನಿಮಗೆ ಕಾನೂನು ಪಾಲನೆಯ ಶಿಸ್ತು ಮೂಡುವುದು ಕಷ್ಟವಾಗುತ್ತದೆ ಎಂದು ಕೃಷ್ಣರಾಜ ಸಂಚಾರ ಠಾಣೆಯ ಸಹಾಯಕ ಪೊಲೀಸ್ ಇನ್ಸಪೆಕ್ಟರ್ ವೆಂಕಟೇಶ್ ಹೇಳಿದರು.

ಮಂಗಳವಾರ ನಗರದ ಕುವೆಂಪುನಗರದಲ್ಲಿರುವ ಕಾವೇರಿ ವಿದ್ಯಾ ಸಂಸ್ಥೆ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಸಂಚಾರ ನಿಯಮಗಳ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿದ್ಯಾರ್ಥಿಗಳಾದ ನಿಮಗೆ ಸಂಚಾರ ನಿಯಮಗಳ ಸ್ಪಷ್ಟ ಅರಿವಿರುತ್ತದೆ. ಹೀಗಿದ್ದರೂ ನಿಯಮಗಳನ್ನು ಪಾಲಿಸುವುದಿಲ್ಲ. ಸಿಗ್ನಲ್ ಜಂಪ್, ಮೂವರು ಕುಳಿತು ವಾಹನ ಚಾಲನೆ ಮಾಡುವುದು, ಹೆಲ್ಮೆಟ್ ಧರಿಸದೆ ವಾಃನ ಚಾಲನೆ ಮಾಡುವುದನ್ನು ಅಭ್ಯಾಸ ಮಾಡಿಕೊಂಡಿರುತ್ತೀರಿ. ನಿಮ್ಮ ನಡೆ ಸರಿಯೇ ಎಂದು ಯೋಚಿಸಿ ಎಂದರು.

ಪೋಷಕರು ನೀವು ಚೆನ್ನಾಗಿ ಓದಲಿ, ಸಮಯಕ್ಕೆ ಸರಿಯಾಗಿ ಕಾಲೇಜಿಗೆ ತೆರಳಲಿ ಎಂಬ ಉದ್ದೇಶದಿಂದ ವಾಹನ ಕೊಡಿಸಿರುತ್ತಾರೆ. ಆದರೆ, ನೀವು ಕಾಲೇಜಿಗೆ ತೆರಳುವ ಬದಲು ಮೂವರು ಸ್ನೇಹಿತರನ್ನು ಒಂದೇ ವಾಹನದಲ್ಲಿ ಕುಳ್ಳಿರಿಸಿಕೊಂಡು ನಗರ ಪ್ರದಕ್ಷಣೆ ಹಾಕುತ್ತೀರಿ. ಇಂತಹ ಸಂದರ್ಭದಲ್ಲಿ ಅಪಘಾತವಾದಲ್ಲಿ ನಿಮ್ಮ ಹಾಗೂ ನಿಮ್ಮ ಸ್ನೇಹಿತರ ಕುಟುಂಬ ಸಂಕಷ್ಟಕ್ಕೊಳಗಾಗುತ್ತದೆ ಎಂಬುದರ ಅರಿವು ನಿಮಗಿರಬೇಕು ಎಂದು ಹೇಳಿದರು.

ಇನ್ನು ವಾಹನ ಚಾಲನಾ ಪರವಾನಗಿ ಪಡೆಯದೇ ಕೆಲವರು ವಾಹನ ಚಾಲನೆ ಮಾಡುತ್ತೀರಿ. ಇದು ಕಾನೂನಿನ ಪ್ರಕಾರ ಅಪರಾಧವಾಗುತ್ತೆ. ಒಂದು ವೇಳೆ ಅಪಘಾತ ಸಂಭವಿಸಿದಲ್ಲಿ ನೀವು ಮಾಡಿದ ತಪ್ಪಿಗೆ ನಿಮ್ಮ ಪೋಷಕರು ದಂಡ ತೆರಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ವಾಹನ ಮಾಲೀಕರಿಗೆ ೬ ತಿಂಗಳ ಸಜೆ ಅಥವ ೨೫ ಸಾವಿರ ರೂ. ವರೆಗೂ ದಂಡ ವಿಧಿಸುವ ಅವಕಾಶ ಕಾನೂನಿನಲ್ಲಿದೆ ಎಂದು ಎಚ್ಚರಿಕೆ ನೀಡಿದರು.

ನೀವುಗಳು ಸಂಚಾರ ನಿಯಮ ಉಲ್ಲಂಘಿಸಿದಲ್ಲಿ ನಾವು ದಂಡ ವಿಧಿಸುತ್ತೇನೆ. ಈ ಕಾರಣಕ್ಕೆ ಕೆಲವರು ನಮ್ಮ ಮೇಲೆ ಬೇಸರ ವ್ಯಕ್ತಪಡಿಸುತ್ತಾರೆ. ಆ ಹಣವನ್ನು ನಾವು ಮನೆಗೆ ತೆಗೆದುಕೊಂಡು ಹೋಗುವುದಿಲ್ಲ. ಸರ್ಕಾಋ ಸೂಚನೆ ನೀಡಿದಂತೆ ನಾವು ಕೆಲಸ ಮಾಡಬೇಕು. ನಿಯಮಗಳನ್ನು ಪಾಲಿಸಿದಲ್ಲಿ ಯಾರೂ ಕೂಡ ನಿಮಗೆ ದಂಡ ವಿಧಿಸಲು ಸಾಧ್ಯವಾಗುವುದಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಕೆ.ಆರ್. ಸಂಚಾರ ಠಾಣೆಯ ಎಸ್‌ಐ ಮದನಕುಮಾರ್, ವೇದಿಕೆಯ ಅಧ್ಯಕ್ಷ ಬಸವರಾಜ್, ಕಾರ್ಯದರ್ಶಿ ಸತೀಶ್, ಮಹಿಳಾ ವಿಭಾಗದ ಅಧ್ಯಕ್ಷೆ ಕವಿತ, ಕಾಲೇಜಿನ ಪ್ರಾಂಶುಪಾಲರಾದ ಪದ್ಮಾವತಿ, ಹೆಡ್ ಕಾನ್ಸಟೆಬಲ್ ರಾಜು ಮುಂತಾದವರು ಹಾಜರಿದ್ದರು.

andolana

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago