ಜಿಲ್ಲೆಗಳು

ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಕ್ರಮದ ಬಗ್ಗೆ ಜಾಗೃತರಾಗಬೇಕು: ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ಕಿವಿಮಾತು

ಹನೂರು: ಶಾಲಾ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಪಟ್ಟಣ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ತಿಳಿಸಿದರು.


ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷಾ ಸಪ್ತಾಹ ಮತ್ತು 112 ಅರಿವು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ದೇಶದಲ್ಲಿ ಪ್ರತಿದಿನ ಐನೂರಕ್ಕೂ ಹೆಚ್ಚು ಜನರು ಮೃತಪಡುತ್ತಿದ್ದಾರೆ. ಇದರಲ್ಲಿ ಹೆಚ್ಚಿನವರು ಅಪಘಾತದಿಂದ ಮೃತಪಡುತ್ತಿರುವುದು ನೋವಿನಸಂಗತಿ.ಶಾಲಾ ವಿದ್ಯಾರ್ಥಿಗಳು 18ವರ್ಷ ತುಂಬುವ ವರೆಗೂ ವಾಹನ ಚಾಲನೆ ಮಾಡಬಾರದು ಇದು ಅಪರಾಧ. ವಾಹನ ಚಾಲಕರು ಪ್ರತಿಯೊಬ್ಬರು ಡ್ರೈವಿಂಗ್ ಲೈಸನ್ಸ್, ಇನ್ಸುರೆನ್ಸ್ ,ಹೆಲ್ಮೆಟ್ ಸೇರಿದಂತೆ ಸರ್ಕಾರ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಸಪ್ತಾಹ ದ ಬಗ್ಗೆ ತಮ್ಮ ನೆರೆಹೊರೆಯವರಿಗೆ ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಒಂದು ನಿಗದಿತ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು. ಅದನ್ನು ಹೊರತುಪಡಿಸಿ ಸಮಾಜಘಾತುಕ ಕೆಲಸಗಳಲ್ಲಿ ಭಾಗಿಯಾಗಬಾರದು ಇದರಿಂದ ತಮ್ಮ ಜೀವನವೇ ಕಷ್ಟದ ಬದುಕಿನಲ್ಲಿ ಸಿಲುಕಿಕೊಳ್ಳಲಿದೆ. ಇದರಿಂದ ಪೋಷಕರಿಗೆ ಸಹ ಅತೀವ ನೋವು ಉಂಟಾಗುತ್ತದೆ . ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಸಂದರ್ಭದಲ್ಲಿ ಓದಿಗಷ್ಟೇ ಮಹತ್ವ ನೀಡಿ ಉನ್ನತ ಸ್ಥಾನಮಾನಗಳನ್ನು ಪಡೆಯುವ ಮೂಲಕ ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಬೇಕು ಎಂದು ತಿಳಿಸಿದರು.

ಪೊಲೀಸ್ ಇಲಾಖೆ ರಾಜ್ಯಾದ್ಯಂತ 112 ಸೇವೆ ಜಾರಿಗೆ ತಂದಿದ್ದು ,ತುರ್ತು ಸಂದರ್ಭಗಳಲ್ಲಿ, ಗಲಾಟೆ, ಅಪಘಾತ ಸೇರಿದಂತೆ ಸಮಾಜದ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪರಾಧ ಪ್ರಕರಣಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡಿ ನಿಮ್ಮ ಹೆಸರನ್ನು ಗೌಪ್ಯವಾಗಿಡಲಾಗುವುದು.ಪೊಲೀಸ್ ಇಲಾಖೆ ಸದಾ 24 ಗಂಟೆಯೂ ನಿಮ್ಮ ಜೊತೆಯಲ್ಲಿರಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವೇಕಾನಂದ ಶಾಲೆ ಪ್ರಾಂಶುಪಾಲ ಮಧುಸೂದನ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago