ಜಿಲ್ಲೆಗಳು

ವಿದ್ಯಾರ್ಥಿಗಳು ಇರುವ ಸವಲತ್ತು ಬಳಸಿ ಅಪರಿಮಿತ ಸಾಧನೆ ಮಾಡಬೇಕು : ಮಂಜುಳಾ ಮಾನಸ

ಮೈಸೂರು : ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾರ್ಥಿಗಳು ಇರುವ ಮಿತ ಸವಲತ್ತುಗಳನ್ನು ಬಳಸಿಕೊಂಡು ಅಪರಿಮಿತ ಸಾಧನೆ ಮಾಡಬೇಕು ಎಂದು ಮೈಸೂರಿನ ಪ್ರಸಿದ್ಧ ವಕೀಲರು ಹಾಗೂ ಮೈಸೂರು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕಿನ ಅಧ್ಯಕ್ಷರು ಆದ  ಮಂಜುಳಾ ಮಾನಸ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮೈಸೂರಿನ ರೂಪಾನಗರದ ದೀಪಾ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಸರಸ್ವತಿ ಶಾರದಾ ಪೂಜಾ ಕಾರ್ಯಕ್ರಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಸಮಾರಂಭವನ್ನು ಉದ್ಘಾಟಿಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಮೂವತ್ತು ವರ್ಷಗಳ ಹಿಂದಿನ ಕಾಲಘಟ್ಟದಲ್ಲಿ ಓದಲು ಆಗದ ಪರಿಸ್ಥಿತಿಗಳಲ್ಲಿ ಶ್ರದ್ಧೆಯಿಂದ ಕಲಿತವರು ಮುಂದೆ ಬಂದಿದ್ದಾರೆ, ಅದಕ್ಕೆ ನಮ್ಮಂತೆ ಇರುವ ಅನೇಕ ನಿದರ್ಶನಗಳಿವೆ.
ವಿನಯದಿಂದ ಶ್ರದ್ಧೆಯಿಂದ ಕಲಿಯದೇ ಉಳಿದವರ ಬದುಕು ಇತರರಿಗೆ ಹೇಗೆ ಪಾಠವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಿಮ್ಮ ಜೊತೆ ನೀವು ಮಾತನಾಡಬೇಕು, ಅದಕ್ಕೆ ದಿನದಲ್ಲಿ ಒಂದಷ್ಟು ಸಮಯವನ್ನು ಮೀಸಲಿಡಬೇಕು, ಆಗ ಮಾತ್ರ ನಿಮ್ಮೊಳಗಿನ ಅಂತರಂಗವು ಬಾಹ್ಯ ಪ್ರಪಂಚದಲ್ಲಿ ಲೀನವಾಗುತ್ತದೆ.
ಈ ಅಭ್ಯಾಸ ಮೊದಲಿಗೆ ಕಷ್ಟವಾದರೂ ನಂತರ ರೂಢಿಯಾಗುತ್ತದೆ. ಹೀಗೆ ಏಕಾಗ್ರತೆಯಿಂದ ಸಾಧಿಸಿದರೆ ನಿಮ್ಮನ್ನು ತಡೆಯುವವರು ಯಾರು ಎಂದು ತಿಳಿಸಿದರು.
ನಾವು ಪ್ರತಿದಿನ ಬೆಳಿಗ್ಗೆ ಬೇಗ ಎದ್ದು,  ನಿನ್ನೆ ಕಳೆದುಹೋಯಿತು, ನಾಳೆ ಹೇಗೋ ಗೊತ್ತಿಲ್ಲ, ಇಂದು ಮಾತ್ರ ನಮ್ಮದು ಎಂದು ಪ್ರಾರ್ಥನೆ ಸಲ್ಲಿಸಿ ಧನಾತ್ಮಕವಾಗಿ ಯೋಚಿಸಿ ಮುಂದೆ ಗುರುತರ ಸಾಧನೆ ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ದೀಪಾ ಶಿಕ್ಷಣ ಮತ್ತು ಸೇವಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಎಂ ರಾಮಪ್ಪ ಅವರು ಮಾತನಾಡುತ್ತಾ “ಈ ಮುನ್ನ ಸಾಧನೆ ಮಾಡಿರುವವರನ್ನು ಮಾದರಿಯಾಗಿಟ್ಟುಕೊಂಡು ನಾವು ಕಾರ್ಯೋನ್ಮುಖರಾಗಬೇಕು.
ಪ್ರಸ್ತುತ ಸಂದರ್ಭದಲ್ಲಿ ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ನಾವೇ ಪುಣ್ಯವಂತರು. ಅವುಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಲು ಮುಂದಾಗಬೇಕು. ಎಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಮುಂದಿನ ವ್ಯಾಸಂಗಕ್ಕೆ ಸಿದ್ಧರಾಗಿ ಎಂದು ತಿಳಿಸಿದರು.
ಜೊತೆಗೆ ಪೋಷಕರು ತಮ್ಮ ಮಕ್ಕಳ ಬಗ್ಗೆ ಅವರ ನಡೆನುಡಿಗಳ ಕುರಿತು ಕಾಳಜಿಯನ್ನು ವಹಿಸಬೇಕು ಎಂದು ಹೇಳಿದರು. ಹೆಚ್ಚಿನದಾಗಿ ಆರೋಗ್ಯದ ಕಡೆ ಗಮನ ಹರಿಸಿ ಪರೀಕ್ಷೆ ಭಯವನ್ನ ಬಿಟ್ಟು ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಗಳಿಸಬೇಕು ಎಂದು ಕರೆನೀಡಿದರು. ಇದೇ ವೇಳೆ ಶ್ರೀಮತಿ ಮಂಜುಳಾ ಮಾನಸ ಅವರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು.
ಜಿನ ಪ್ರಾಂಶುಪಾಲರಾದ ಶ್ರೀಮತಿ ಪ್ರಣೀತ ಎರ್ಮಾಳ್, ದೀಪಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗೀತಾ ಹೆಚ್ ರವರು ಹಾಗೂ ದೀಪಾ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಬಾಬು ಎ ಕೆ ಹಾಗೂ ದೀಪಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಿಲ್ಪಾ ಅವರು ಭಾಗವಹಿಸಿದ್ದರು. ಸಮಾರಂಭದಲ್ಲಿ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.
andolanait

Recent Posts

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

25 mins ago

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…

29 mins ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…

1 hour ago

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

1 hour ago

ಓದುಗರ ಪತ್ರ: ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಿ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…

1 hour ago

ವಿಕಸಿತ್ ಭಾರತ್- ಜಿ ರಾಮ್ ಜಿ: ಮಹಾತ್ಮನನ್ನು ಮರೆಗೆ ಸರಿಸುವ ಹುನ್ನಾರ

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…

2 hours ago