ಜಿಲ್ಲೆಗಳು

ವಿದ್ಯಾರ್ಥಿಗಳು ಇರುವ ಸವಲತ್ತು ಬಳಸಿ ಅಪರಿಮಿತ ಸಾಧನೆ ಮಾಡಬೇಕು : ಮಂಜುಳಾ ಮಾನಸ

ಮೈಸೂರು : ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾರ್ಥಿಗಳು ಇರುವ ಮಿತ ಸವಲತ್ತುಗಳನ್ನು ಬಳಸಿಕೊಂಡು ಅಪರಿಮಿತ ಸಾಧನೆ ಮಾಡಬೇಕು ಎಂದು ಮೈಸೂರಿನ ಪ್ರಸಿದ್ಧ ವಕೀಲರು ಹಾಗೂ ಮೈಸೂರು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕಿನ ಅಧ್ಯಕ್ಷರು ಆದ  ಮಂಜುಳಾ ಮಾನಸ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮೈಸೂರಿನ ರೂಪಾನಗರದ ದೀಪಾ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಸರಸ್ವತಿ ಶಾರದಾ ಪೂಜಾ ಕಾರ್ಯಕ್ರಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಸಮಾರಂಭವನ್ನು ಉದ್ಘಾಟಿಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಮೂವತ್ತು ವರ್ಷಗಳ ಹಿಂದಿನ ಕಾಲಘಟ್ಟದಲ್ಲಿ ಓದಲು ಆಗದ ಪರಿಸ್ಥಿತಿಗಳಲ್ಲಿ ಶ್ರದ್ಧೆಯಿಂದ ಕಲಿತವರು ಮುಂದೆ ಬಂದಿದ್ದಾರೆ, ಅದಕ್ಕೆ ನಮ್ಮಂತೆ ಇರುವ ಅನೇಕ ನಿದರ್ಶನಗಳಿವೆ.
ವಿನಯದಿಂದ ಶ್ರದ್ಧೆಯಿಂದ ಕಲಿಯದೇ ಉಳಿದವರ ಬದುಕು ಇತರರಿಗೆ ಹೇಗೆ ಪಾಠವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಿಮ್ಮ ಜೊತೆ ನೀವು ಮಾತನಾಡಬೇಕು, ಅದಕ್ಕೆ ದಿನದಲ್ಲಿ ಒಂದಷ್ಟು ಸಮಯವನ್ನು ಮೀಸಲಿಡಬೇಕು, ಆಗ ಮಾತ್ರ ನಿಮ್ಮೊಳಗಿನ ಅಂತರಂಗವು ಬಾಹ್ಯ ಪ್ರಪಂಚದಲ್ಲಿ ಲೀನವಾಗುತ್ತದೆ.
ಈ ಅಭ್ಯಾಸ ಮೊದಲಿಗೆ ಕಷ್ಟವಾದರೂ ನಂತರ ರೂಢಿಯಾಗುತ್ತದೆ. ಹೀಗೆ ಏಕಾಗ್ರತೆಯಿಂದ ಸಾಧಿಸಿದರೆ ನಿಮ್ಮನ್ನು ತಡೆಯುವವರು ಯಾರು ಎಂದು ತಿಳಿಸಿದರು.
ನಾವು ಪ್ರತಿದಿನ ಬೆಳಿಗ್ಗೆ ಬೇಗ ಎದ್ದು,  ನಿನ್ನೆ ಕಳೆದುಹೋಯಿತು, ನಾಳೆ ಹೇಗೋ ಗೊತ್ತಿಲ್ಲ, ಇಂದು ಮಾತ್ರ ನಮ್ಮದು ಎಂದು ಪ್ರಾರ್ಥನೆ ಸಲ್ಲಿಸಿ ಧನಾತ್ಮಕವಾಗಿ ಯೋಚಿಸಿ ಮುಂದೆ ಗುರುತರ ಸಾಧನೆ ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ದೀಪಾ ಶಿಕ್ಷಣ ಮತ್ತು ಸೇವಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಎಂ ರಾಮಪ್ಪ ಅವರು ಮಾತನಾಡುತ್ತಾ “ಈ ಮುನ್ನ ಸಾಧನೆ ಮಾಡಿರುವವರನ್ನು ಮಾದರಿಯಾಗಿಟ್ಟುಕೊಂಡು ನಾವು ಕಾರ್ಯೋನ್ಮುಖರಾಗಬೇಕು.
ಪ್ರಸ್ತುತ ಸಂದರ್ಭದಲ್ಲಿ ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ನಾವೇ ಪುಣ್ಯವಂತರು. ಅವುಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಲು ಮುಂದಾಗಬೇಕು. ಎಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಮುಂದಿನ ವ್ಯಾಸಂಗಕ್ಕೆ ಸಿದ್ಧರಾಗಿ ಎಂದು ತಿಳಿಸಿದರು.
ಜೊತೆಗೆ ಪೋಷಕರು ತಮ್ಮ ಮಕ್ಕಳ ಬಗ್ಗೆ ಅವರ ನಡೆನುಡಿಗಳ ಕುರಿತು ಕಾಳಜಿಯನ್ನು ವಹಿಸಬೇಕು ಎಂದು ಹೇಳಿದರು. ಹೆಚ್ಚಿನದಾಗಿ ಆರೋಗ್ಯದ ಕಡೆ ಗಮನ ಹರಿಸಿ ಪರೀಕ್ಷೆ ಭಯವನ್ನ ಬಿಟ್ಟು ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಗಳಿಸಬೇಕು ಎಂದು ಕರೆನೀಡಿದರು. ಇದೇ ವೇಳೆ ಶ್ರೀಮತಿ ಮಂಜುಳಾ ಮಾನಸ ಅವರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು.
ಜಿನ ಪ್ರಾಂಶುಪಾಲರಾದ ಶ್ರೀಮತಿ ಪ್ರಣೀತ ಎರ್ಮಾಳ್, ದೀಪಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗೀತಾ ಹೆಚ್ ರವರು ಹಾಗೂ ದೀಪಾ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಬಾಬು ಎ ಕೆ ಹಾಗೂ ದೀಪಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಿಲ್ಪಾ ಅವರು ಭಾಗವಹಿಸಿದ್ದರು. ಸಮಾರಂಭದಲ್ಲಿ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.
andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

3 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

4 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

5 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

5 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

13 hours ago