ಜಿಲ್ಲೆಗಳು

ಮಗಳಿಂದ ಪೋಷಕರಿಗೆ ಆಸ್ತಿ ಹಿಂದಿರುಗಿಸಿದ ಉಪವಿಭಾಗಧಿಕಾರಿ

ಮಡಿಕೇರಿ: ಪೋಷಕರ ಯೋಗಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಇಲ್ಲಿನ ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ.
ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್.ಜಾನಕಿ ತಮ್ಮ ಹೆಸರಿನಲ್ಲಿ 0.15 ಎಕರೆ ಆಸ್ತಿಯನ್ನು ಹೊಂದಿದ್ದರು. ಅವರಿಂದ ಅವರ ಎರಡನೇ ಮಗಳಾದ ಬಿ.ಎಸ್ .ಜಯಲಕ್ಷ್ಮೀ ದಾನಪತ್ರದ ಮೂಲಕ ತಮ್ಮ ಹೆಸರಿಗೆ ಖಾತೆಯನ್ನು ಮಾಡಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ಪೋಷಕರ ಯೋಗಕ್ಷೇಮ ನೋಡಿಕೊಳ್ಳದೆ ನಿರ್ಲಕ್ಷಿಸಿದ್ದರು. ಇದರಿಂದ ನೊಂದ ಪೋಷಕರು, ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ಅವರಿಗೆ ಅರ್ಜಿ ಸಲ್ಲಿಸಿ ದಾನಪತ್ರ ರದ್ದುಗೊಳಿಸಿ ಆಸ್ತಿಯನ್ನು ವಾಪಸ್ ಕೊಡಿಸುವಂತೆ ಮನವಿ ಮಾಡಿದ್ದರು. ಆ ನಿಟ್ಟಿನಲ್ಲಿ ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ಅವರು ಅರ್ಜಿಯನ್ನು ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡಿದ್ದರು.
ವಿಚಾರಣೆ ನಡೆಸಿದ ಉಪವಿಭಾಗಧಿಕಾರಿ ಡಾ.ಯತೀಶ್ ಉಲ್ಲಾಳ್, ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ 2007ರ ಅಡಿ ದಾನಪತ್ರ ರದ್ದುಗೊಳಿಸಿ ಅಸ್ತಿಯನ್ನು ಬಿ.ಎಸ್.ಜಾನಕಿ ಅವರ ಹೆಸರಿಗೆ ವರ್ಗಾಯಿಸುವಂತೆ ಆದೇಶ ನೀಡಿದ್ದಾರೆ.

andolanait

Recent Posts

ಹನೂರು | ಕಾಡಾನೆ ದಾಳಿಗೆ ಫಸಲು ಹಾನಿ ; ಸೂಕ್ತ ಪರಿಹಾರಕ್ಕೆ ಆಗ್ರಹ

ಹನೂರು : ಕಾಡಾನೆ ದಾಳಿಗೆ ಹಲವಾರು ವರ್ಷಗಳಿಂದ ಪೋಷಣೆ ಮಾಡಿದ್ದ ತೆಂಗು, ಬಾಳೆ, ಮಾವು, ಅಡಿಕೆ ಬೆಳೆ ನಾಶವಾಗಿ ರೈತನಿಗೆ…

7 mins ago

ಶಿಕ್ಷಕರೇ ಇಲ್ಲ, ಎಸ್‌ಎಸ್‌ಎಲ್‌ಸಿಯಲ್ಲಿ 94% ಬಂದಿದ್ದು ಹೇಗೆ? ಪರೀಕ್ಷೆಯಲ್ಲಿ ನಕಲು ನಡೆದಿದೆ ; ವಿಶ್ವನಾಥ್‌ ಆರೋಪ

ಮೈಸೂರು : ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು ಹೇಗೆ. ಹಠಕ್ಕೆ…

29 mins ago

ಕೊಲೆ ಪ್ರಕರಣ | ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಶಾಸಕ ವಿನಯ್‌ ಕುಲಕರ್ಣಿ

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…

1 hour ago

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

1 hour ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

2 hours ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

3 hours ago