ಜಿಲ್ಲೆಗಳು

ಮಗಳಿಂದ ಪೋಷಕರಿಗೆ ಆಸ್ತಿ ಹಿಂದಿರುಗಿಸಿದ ಉಪವಿಭಾಗಧಿಕಾರಿ

ಮಡಿಕೇರಿ: ಪೋಷಕರ ಯೋಗಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಇಲ್ಲಿನ ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ.
ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್.ಜಾನಕಿ ತಮ್ಮ ಹೆಸರಿನಲ್ಲಿ 0.15 ಎಕರೆ ಆಸ್ತಿಯನ್ನು ಹೊಂದಿದ್ದರು. ಅವರಿಂದ ಅವರ ಎರಡನೇ ಮಗಳಾದ ಬಿ.ಎಸ್ .ಜಯಲಕ್ಷ್ಮೀ ದಾನಪತ್ರದ ಮೂಲಕ ತಮ್ಮ ಹೆಸರಿಗೆ ಖಾತೆಯನ್ನು ಮಾಡಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ಪೋಷಕರ ಯೋಗಕ್ಷೇಮ ನೋಡಿಕೊಳ್ಳದೆ ನಿರ್ಲಕ್ಷಿಸಿದ್ದರು. ಇದರಿಂದ ನೊಂದ ಪೋಷಕರು, ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ಅವರಿಗೆ ಅರ್ಜಿ ಸಲ್ಲಿಸಿ ದಾನಪತ್ರ ರದ್ದುಗೊಳಿಸಿ ಆಸ್ತಿಯನ್ನು ವಾಪಸ್ ಕೊಡಿಸುವಂತೆ ಮನವಿ ಮಾಡಿದ್ದರು. ಆ ನಿಟ್ಟಿನಲ್ಲಿ ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ಅವರು ಅರ್ಜಿಯನ್ನು ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡಿದ್ದರು.
ವಿಚಾರಣೆ ನಡೆಸಿದ ಉಪವಿಭಾಗಧಿಕಾರಿ ಡಾ.ಯತೀಶ್ ಉಲ್ಲಾಳ್, ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ 2007ರ ಅಡಿ ದಾನಪತ್ರ ರದ್ದುಗೊಳಿಸಿ ಅಸ್ತಿಯನ್ನು ಬಿ.ಎಸ್.ಜಾನಕಿ ಅವರ ಹೆಸರಿಗೆ ವರ್ಗಾಯಿಸುವಂತೆ ಆದೇಶ ನೀಡಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago