ಜಿಲ್ಲೆಗಳು

ಮೇಕೆದಾಟು ಯೋಜನೆಗೆ ಅಫಿಡೆವಿಟ್ ಸಲ್ಲಿಸಿ: ಲಕ್ಷ್ಮಣ್ ಒತ್ತಾಯ

ಮೈಸೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ತಮಿಳುನಾಡು ಸರ್ಕಾರ ಆಕ್ಷೇಪಣೆ ತೆಗೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಲೇ ಸುಪ್ರಿಂ ಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಸದಿದ್ದರೆ ತಡೆಯಾಜ್ಞೆ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಮುಖ್ಯಮಂತ್ರಿಯವರು ರಾಜಕೀಯ ಬಿಟ್ಟು ಸರ್ವಪಕ್ಷ ಸಭೆ ಕರೆದು ಅಗತ್ಯ ಕ್ರಮಕೈಗೊಳ್ಳಲು ಮುಂದಾಗಬೇಕು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಗ್ರಹಿಸಿದರು.

ನಗರ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರಿಂ ಕೋರ್ಟ್‌ನ ನೀರು ಹಂಚಿಕೆ ತೀರ್ಪಿನಂತೆ ಕುಡಿಯುವ ನೀರಿಗಾಗಿ ನಾವು ಯಾವುದೇ ಯೋಜನೆಯನ್ನೂ ರಾಜ್ಯವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಬಹುದು. ಅದರಂತೆ ಬಿಳಿಗುಂಡ್ಲು ಬಳಿ ಅಣೆಕಟ್ಟೆ ಕಟ್ಟಲು ನಮಗೆ ಹಕ್ಕಿದೆ. ಆದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮಿಳುನಾಡು ಸರ್ಕಾರದ ಅನುಮತಿ ಕೇಳಿ ಪತ್ರ ಬರೆದು ತಮ್ಮ ಅಜ್ಞಾನ ಪ್ರದರ್ಶಿಸಿದ್ದಾರೆ. ಈ ಪತ್ರದ ಆಧಾರದ ಮೇಲೆ ಸುಪ್ರಿಂ ಕೋರ್ಟ್ ಮೆಟ್ಟಿಲೇರಿರುವ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ನಿರಾಕರಿಸುವಂತೆ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದು, ಇದಕ್ಕೆ ಉತ್ತರ ನೀಡಲು ಕರ್ನಾಟಕ ಸರ್ಕಾರಕ್ಕೆ ಗಡುವು ನೀಡಿದ್ದು, ಈಗಾಗಲೇ ೭ ದಿನ ಮುಗಿದಿದೆ. ಆದರೆ, ಮುಖ್ಯಮಂತ್ರಿಗಳು ಜನ ಸಂಕಲ್ಪ ಯಾತ್ರೆ ಹೆಸರಿನಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಬೈಯುವುದರಲ್ಲಿ ನಿರತರಾಗಿದ್ದಾರೆ ಎಂದು ಕಿಡಿ ಕಾರಿದರು.

ಮೈಸೂರು ಜಿಲ್ಲೆಗೆ ಹೊಸದಾಗಿ ಇವಿಎಂ ಯಂತ್ರಗಳು ಬಂದಿದ್ದು, ಇವುಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆ ನೀಡಿದ್ದಾರೆ. ಆದ್ದರಿಂದ ಎಲ್ಲಾ ಪಕ್ಷದ ಮುಖಂಡರನ್ನು ಕರೆದು ಅವರ ಸಮ್ಮುಖದಲ್ಲಿ ಅವುಗಳ ಕಾರ್ಯವಿಧಾನವನ್ನು ತೋರಿಸಬೇಕು ಎಂದು ಅವರು ಆಗ್ರಹಿಸಿದರು.

ಮುಡಾ ಅಧ್ಯಕ್ಷ ಸ್ಥಾನದಲ್ಲಿದ್ದ ಎಚ್.ವಿ.ರಾಜೀವ್ ಅವಧಿ ಮುಗಿದ ಬಳಿಕ ಈವರೆಗೂ ಒಂದು ಸಭೆುಂನ್ನೂ ನಡೆಸಿಲ್ಲ. ಜಿಲ್ಲಾಧಿಕಾರಿಗೆ ಅದರ ಅಧಿಕಾರ ನೀಡದೆ ಆಯುಕ್ತರನ್ನು ಇಟ್ಟುಕೊಂಡು ಸಚಿವರು, ಶಾಸಕರುಗಳು ರಿಯಲ್‌ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದಾರೆ. ದಸರಾ ಮುಗಿದ ಮೇಲೆ ಸಚಿವರು ನಾಪತ್ತೆಯಾಗಿದ್ದು, ಇದರ ವಿರುದ್ಧ ಕಾಂಗ್ರೆಸ್ ಚಳವಳಿ ನಡೆಸಲಿದೆ ಎಂದರು.

ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ವಕ್ತಾರ ಮಹೇಶ್,ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಎಲ್.ಗೌಡ ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolana

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

3 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

4 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

5 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

10 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

11 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

11 hours ago