ಜಿಲ್ಲೆಗಳು

ಪ್ರತ್ಯೇಕ ಕೊಡವ ರಾಜ್ಯ ಬೇಡಿಕೆಗೆ ಸುಬ್ರಮಣ್ಯ ಸ್ವಾಮಿ ಬೆಂಬಲ

ಸುಪ್ರೀಂಕೋರ್ಟ್ ನಲ್ಲಿ ದಾವೆ, ಮುಂದಿನ ಜೂಲೈ ಒಳಗೆ ಸ್ವಾಯತ್ತ ರಾಜ್ಯ ಎಂದ ಸ್ವಾಮಿ

ಮಡಿಕೇರಿ: ಪ್ರತ್ಯೇಕ ಕೊಡಗು ರಾಜ್ಯದ ಬೇಡಿಕೆಗೆ ಮಾಜಿ ಕೇಂದ್ರ ಸಚಿವ ಸುಬ್ರಮಣ್ಯ ಸ್ವಾಮಿ ಬೆಂಬಲ ಘೋಷಿಸಿದ್ದು ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿ ಜೂನ್ ಅಥವಾ ಜುಲೈ ಅಂತ್ಯದೊಳಗೆ ಕೊಡವ ಲ್ಯಾಂಡ್ ಬೇಡಿಕೆಗೆ ನ್ಯಾಯಾಲಯದಿಂದ ಸ್ಪಂದನೆ ದೊರಕುವಂತೆ ಮಾಡುವುದಾಗಿ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಶನಿವಾರ ಕೊಡವ ನ್ಯಾಷನಲ್ ಕೌನ್ಸಿಲ್(ಸಿಎನ್‌ಸಿ) ಆಯೋಜಿಸಿದ್ದ 32ನೇ ಕೊಡವ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ, ಕೊಡವರಿಗೆ ಸ್ವಾಯತ್ತ ನಾಡು ಕೇಳಲು ಸಂವಿಧಾನಾತ್ಮಕವಾಗಿ ಎಲ್ಲಾ ಹಕ್ಕು ಇದೆ. ಸಿಎನ್‌ಸಿಗೆ ಕಾನೂನು ಹೋರಾಟದ ಮೂಲಕ ಭೌಗೋಳಿಕ-ರಾಜಕೀಯ ಸ್ವಾಯತ್ತೆ ಗುರಿ ಸಾಧಿಸಬೇಕು ಎಂದರು.

” ನಿಮಗೆ(ಕೊಡಗು/ಕೊಡವರಿಗೆ) ದೊಡ್ಡ ಅನ್ಯಾಯವಾಗಿದೆ. ಆದರೆ ಹೋರಾಟವನ್ನು ಮುಂದುವರಿಸಿ ” ಎಂದ ಸ್ವಾಮಿ, ಕೊಡಗಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತ ಸ್ಥಾನಮಾನ ಪಡೆಯಲು ಶೀಘ್ರವೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದರು.

ಉತ್ತರಾಖಂಡ್, ತೆಲಂಗಾಣ, ಹರಿಯಾಣ, ಹಿಮಾಚಲ ಪ್ರದೇಶ ಸುದೀರ್ಘ ಹೋರಾಟದ ನಂತರ ಪ್ರತ್ಯೇಕ ರಾಜ್ಯಗಳಾಗಿವೆ. ಕೊಡಗು ಸ್ವಾಯತ್ತ ನಾಡು ಏಕೆ ಆಗಬಾರದು” ಎಂದು ಅವರು ಪ್ರಶ್ನಿಸಿದರು. ಮುಂದಿನ ವರ್ಷ ನವೆಂಬರ್ ವೇಳೆಗೆ ಪ್ರತ್ಯೇಕ ಕೊಡವ ಲ್ಯಾಂಡ್ ಘೋಷಣೆಯಾಗಲಿದೆ ಎಂದು ಭರವಸೆ ನೀಡಿದರು.

ಇದೇ ವೇಳೆ ಮೋದಿ ಆಡಳಿತದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಮೋದಿಯನ್ನು ವಿರೋಧಿಸುತ್ತಿಲ್ಲ. ಆದರೆ ಚೀನಾವನ್ನು ಓಲೈಸುವ ಅವರ ನೀತಿಯನ್ನು ನಾನು ವಿರೋಧಿಸುತ್ತೇನೆ. ಅವರು ಚೀನೀಯರಿಗೆ ನಮ್ಮ ಪ್ರದೇಶವನ್ನು ಆಕ್ರಮಿಸಲು ಬಿಡಬಾರದು. ಭಾರತ ಅವರ ವಿರುದ್ಧ ಹೋರಾಡಬೇಕು. ಈಗಿನ ಸರ್ಕಾರದ ಕೆಲವು ತಪ್ಪು ಆರ್ಥಿಕ ನೀತಿಗಳನ್ನೂ ನಾನು ವಿರೋಧಿಸುತ್ತೇನೆ. ಬಿಜೆಪಿಯಲ್ಲಿ ನನ್ನನ್ನು ಬಿಟ್ಟು ಬೇರೆ ಯಾರಿಗೂ ತಪ್ಪು ನೀತಿಗಳನ್ನು ಪ್ರಶ್ನಿಸುವ ತಾಕತ್ತು ಇಲ್ಲ. ನಾನು ಹಲವು ಬಾರಿ ಮನವಿ ಮಾಡಿದರೂ ರಾಮಸೇತುವನ್ನು ಪಾರಂಪರಿಕ ತಾಣ ಎಂದು ಘೋಷಿಸಲು ಪ್ರಧಾನಿ ವಿಫಲರಾಗಿದ್ದಾರೆ ಎಂದರು.

andolana

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

5 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

5 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

5 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

5 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

6 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

6 hours ago