ಸುಪ್ರೀಂಕೋರ್ಟ್ ನಲ್ಲಿ ದಾವೆ, ಮುಂದಿನ ಜೂಲೈ ಒಳಗೆ ಸ್ವಾಯತ್ತ ರಾಜ್ಯ ಎಂದ ಸ್ವಾಮಿ
ಮಡಿಕೇರಿ: ಪ್ರತ್ಯೇಕ ಕೊಡಗು ರಾಜ್ಯದ ಬೇಡಿಕೆಗೆ ಮಾಜಿ ಕೇಂದ್ರ ಸಚಿವ ಸುಬ್ರಮಣ್ಯ ಸ್ವಾಮಿ ಬೆಂಬಲ ಘೋಷಿಸಿದ್ದು ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿ ಜೂನ್ ಅಥವಾ ಜುಲೈ ಅಂತ್ಯದೊಳಗೆ ಕೊಡವ ಲ್ಯಾಂಡ್ ಬೇಡಿಕೆಗೆ ನ್ಯಾಯಾಲಯದಿಂದ ಸ್ಪಂದನೆ ದೊರಕುವಂತೆ ಮಾಡುವುದಾಗಿ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಶನಿವಾರ ಕೊಡವ ನ್ಯಾಷನಲ್ ಕೌನ್ಸಿಲ್(ಸಿಎನ್ಸಿ) ಆಯೋಜಿಸಿದ್ದ 32ನೇ ಕೊಡವ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ, ಕೊಡವರಿಗೆ ಸ್ವಾಯತ್ತ ನಾಡು ಕೇಳಲು ಸಂವಿಧಾನಾತ್ಮಕವಾಗಿ ಎಲ್ಲಾ ಹಕ್ಕು ಇದೆ. ಸಿಎನ್ಸಿಗೆ ಕಾನೂನು ಹೋರಾಟದ ಮೂಲಕ ಭೌಗೋಳಿಕ-ರಾಜಕೀಯ ಸ್ವಾಯತ್ತೆ ಗುರಿ ಸಾಧಿಸಬೇಕು ಎಂದರು.
” ನಿಮಗೆ(ಕೊಡಗು/ಕೊಡವರಿಗೆ) ದೊಡ್ಡ ಅನ್ಯಾಯವಾಗಿದೆ. ಆದರೆ ಹೋರಾಟವನ್ನು ಮುಂದುವರಿಸಿ ” ಎಂದ ಸ್ವಾಮಿ, ಕೊಡಗಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತ ಸ್ಥಾನಮಾನ ಪಡೆಯಲು ಶೀಘ್ರವೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದರು.
ಉತ್ತರಾಖಂಡ್, ತೆಲಂಗಾಣ, ಹರಿಯಾಣ, ಹಿಮಾಚಲ ಪ್ರದೇಶ ಸುದೀರ್ಘ ಹೋರಾಟದ ನಂತರ ಪ್ರತ್ಯೇಕ ರಾಜ್ಯಗಳಾಗಿವೆ. ಕೊಡಗು ಸ್ವಾಯತ್ತ ನಾಡು ಏಕೆ ಆಗಬಾರದು” ಎಂದು ಅವರು ಪ್ರಶ್ನಿಸಿದರು. ಮುಂದಿನ ವರ್ಷ ನವೆಂಬರ್ ವೇಳೆಗೆ ಪ್ರತ್ಯೇಕ ಕೊಡವ ಲ್ಯಾಂಡ್ ಘೋಷಣೆಯಾಗಲಿದೆ ಎಂದು ಭರವಸೆ ನೀಡಿದರು.
ಇದೇ ವೇಳೆ ಮೋದಿ ಆಡಳಿತದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಮೋದಿಯನ್ನು ವಿರೋಧಿಸುತ್ತಿಲ್ಲ. ಆದರೆ ಚೀನಾವನ್ನು ಓಲೈಸುವ ಅವರ ನೀತಿಯನ್ನು ನಾನು ವಿರೋಧಿಸುತ್ತೇನೆ. ಅವರು ಚೀನೀಯರಿಗೆ ನಮ್ಮ ಪ್ರದೇಶವನ್ನು ಆಕ್ರಮಿಸಲು ಬಿಡಬಾರದು. ಭಾರತ ಅವರ ವಿರುದ್ಧ ಹೋರಾಡಬೇಕು. ಈಗಿನ ಸರ್ಕಾರದ ಕೆಲವು ತಪ್ಪು ಆರ್ಥಿಕ ನೀತಿಗಳನ್ನೂ ನಾನು ವಿರೋಧಿಸುತ್ತೇನೆ. ಬಿಜೆಪಿಯಲ್ಲಿ ನನ್ನನ್ನು ಬಿಟ್ಟು ಬೇರೆ ಯಾರಿಗೂ ತಪ್ಪು ನೀತಿಗಳನ್ನು ಪ್ರಶ್ನಿಸುವ ತಾಕತ್ತು ಇಲ್ಲ. ನಾನು ಹಲವು ಬಾರಿ ಮನವಿ ಮಾಡಿದರೂ ರಾಮಸೇತುವನ್ನು ಪಾರಂಪರಿಕ ತಾಣ ಎಂದು ಘೋಷಿಸಲು ಪ್ರಧಾನಿ ವಿಫಲರಾಗಿದ್ದಾರೆ ಎಂದರು.
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…