ಸುಪ್ರೀಂಕೋರ್ಟ್ ನಲ್ಲಿ ದಾವೆ, ಮುಂದಿನ ಜೂಲೈ ಒಳಗೆ ಸ್ವಾಯತ್ತ ರಾಜ್ಯ ಎಂದ ಸ್ವಾಮಿ
ಮಡಿಕೇರಿ: ಪ್ರತ್ಯೇಕ ಕೊಡಗು ರಾಜ್ಯದ ಬೇಡಿಕೆಗೆ ಮಾಜಿ ಕೇಂದ್ರ ಸಚಿವ ಸುಬ್ರಮಣ್ಯ ಸ್ವಾಮಿ ಬೆಂಬಲ ಘೋಷಿಸಿದ್ದು ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿ ಜೂನ್ ಅಥವಾ ಜುಲೈ ಅಂತ್ಯದೊಳಗೆ ಕೊಡವ ಲ್ಯಾಂಡ್ ಬೇಡಿಕೆಗೆ ನ್ಯಾಯಾಲಯದಿಂದ ಸ್ಪಂದನೆ ದೊರಕುವಂತೆ ಮಾಡುವುದಾಗಿ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಶನಿವಾರ ಕೊಡವ ನ್ಯಾಷನಲ್ ಕೌನ್ಸಿಲ್(ಸಿಎನ್ಸಿ) ಆಯೋಜಿಸಿದ್ದ 32ನೇ ಕೊಡವ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ, ಕೊಡವರಿಗೆ ಸ್ವಾಯತ್ತ ನಾಡು ಕೇಳಲು ಸಂವಿಧಾನಾತ್ಮಕವಾಗಿ ಎಲ್ಲಾ ಹಕ್ಕು ಇದೆ. ಸಿಎನ್ಸಿಗೆ ಕಾನೂನು ಹೋರಾಟದ ಮೂಲಕ ಭೌಗೋಳಿಕ-ರಾಜಕೀಯ ಸ್ವಾಯತ್ತೆ ಗುರಿ ಸಾಧಿಸಬೇಕು ಎಂದರು.
” ನಿಮಗೆ(ಕೊಡಗು/ಕೊಡವರಿಗೆ) ದೊಡ್ಡ ಅನ್ಯಾಯವಾಗಿದೆ. ಆದರೆ ಹೋರಾಟವನ್ನು ಮುಂದುವರಿಸಿ ” ಎಂದ ಸ್ವಾಮಿ, ಕೊಡಗಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತ ಸ್ಥಾನಮಾನ ಪಡೆಯಲು ಶೀಘ್ರವೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದರು.
ಉತ್ತರಾಖಂಡ್, ತೆಲಂಗಾಣ, ಹರಿಯಾಣ, ಹಿಮಾಚಲ ಪ್ರದೇಶ ಸುದೀರ್ಘ ಹೋರಾಟದ ನಂತರ ಪ್ರತ್ಯೇಕ ರಾಜ್ಯಗಳಾಗಿವೆ. ಕೊಡಗು ಸ್ವಾಯತ್ತ ನಾಡು ಏಕೆ ಆಗಬಾರದು” ಎಂದು ಅವರು ಪ್ರಶ್ನಿಸಿದರು. ಮುಂದಿನ ವರ್ಷ ನವೆಂಬರ್ ವೇಳೆಗೆ ಪ್ರತ್ಯೇಕ ಕೊಡವ ಲ್ಯಾಂಡ್ ಘೋಷಣೆಯಾಗಲಿದೆ ಎಂದು ಭರವಸೆ ನೀಡಿದರು.
ಇದೇ ವೇಳೆ ಮೋದಿ ಆಡಳಿತದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಮೋದಿಯನ್ನು ವಿರೋಧಿಸುತ್ತಿಲ್ಲ. ಆದರೆ ಚೀನಾವನ್ನು ಓಲೈಸುವ ಅವರ ನೀತಿಯನ್ನು ನಾನು ವಿರೋಧಿಸುತ್ತೇನೆ. ಅವರು ಚೀನೀಯರಿಗೆ ನಮ್ಮ ಪ್ರದೇಶವನ್ನು ಆಕ್ರಮಿಸಲು ಬಿಡಬಾರದು. ಭಾರತ ಅವರ ವಿರುದ್ಧ ಹೋರಾಡಬೇಕು. ಈಗಿನ ಸರ್ಕಾರದ ಕೆಲವು ತಪ್ಪು ಆರ್ಥಿಕ ನೀತಿಗಳನ್ನೂ ನಾನು ವಿರೋಧಿಸುತ್ತೇನೆ. ಬಿಜೆಪಿಯಲ್ಲಿ ನನ್ನನ್ನು ಬಿಟ್ಟು ಬೇರೆ ಯಾರಿಗೂ ತಪ್ಪು ನೀತಿಗಳನ್ನು ಪ್ರಶ್ನಿಸುವ ತಾಕತ್ತು ಇಲ್ಲ. ನಾನು ಹಲವು ಬಾರಿ ಮನವಿ ಮಾಡಿದರೂ ರಾಮಸೇತುವನ್ನು ಪಾರಂಪರಿಕ ತಾಣ ಎಂದು ಘೋಷಿಸಲು ಪ್ರಧಾನಿ ವಿಫಲರಾಗಿದ್ದಾರೆ ಎಂದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…