ಜಿಲ್ಲೆಗಳು

ಪ್ರತ್ಯೇಕ ಕೊಡವ ರಾಜ್ಯ ಬೇಡಿಕೆಗೆ ಸುಬ್ರಮಣ್ಯ ಸ್ವಾಮಿ ಬೆಂಬಲ

ಸುಪ್ರೀಂಕೋರ್ಟ್ ನಲ್ಲಿ ದಾವೆ, ಮುಂದಿನ ಜೂಲೈ ಒಳಗೆ ಸ್ವಾಯತ್ತ ರಾಜ್ಯ ಎಂದ ಸ್ವಾಮಿ

ಮಡಿಕೇರಿ: ಪ್ರತ್ಯೇಕ ಕೊಡಗು ರಾಜ್ಯದ ಬೇಡಿಕೆಗೆ ಮಾಜಿ ಕೇಂದ್ರ ಸಚಿವ ಸುಬ್ರಮಣ್ಯ ಸ್ವಾಮಿ ಬೆಂಬಲ ಘೋಷಿಸಿದ್ದು ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿ ಜೂನ್ ಅಥವಾ ಜುಲೈ ಅಂತ್ಯದೊಳಗೆ ಕೊಡವ ಲ್ಯಾಂಡ್ ಬೇಡಿಕೆಗೆ ನ್ಯಾಯಾಲಯದಿಂದ ಸ್ಪಂದನೆ ದೊರಕುವಂತೆ ಮಾಡುವುದಾಗಿ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಶನಿವಾರ ಕೊಡವ ನ್ಯಾಷನಲ್ ಕೌನ್ಸಿಲ್(ಸಿಎನ್‌ಸಿ) ಆಯೋಜಿಸಿದ್ದ 32ನೇ ಕೊಡವ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ, ಕೊಡವರಿಗೆ ಸ್ವಾಯತ್ತ ನಾಡು ಕೇಳಲು ಸಂವಿಧಾನಾತ್ಮಕವಾಗಿ ಎಲ್ಲಾ ಹಕ್ಕು ಇದೆ. ಸಿಎನ್‌ಸಿಗೆ ಕಾನೂನು ಹೋರಾಟದ ಮೂಲಕ ಭೌಗೋಳಿಕ-ರಾಜಕೀಯ ಸ್ವಾಯತ್ತೆ ಗುರಿ ಸಾಧಿಸಬೇಕು ಎಂದರು.

” ನಿಮಗೆ(ಕೊಡಗು/ಕೊಡವರಿಗೆ) ದೊಡ್ಡ ಅನ್ಯಾಯವಾಗಿದೆ. ಆದರೆ ಹೋರಾಟವನ್ನು ಮುಂದುವರಿಸಿ ” ಎಂದ ಸ್ವಾಮಿ, ಕೊಡಗಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತ ಸ್ಥಾನಮಾನ ಪಡೆಯಲು ಶೀಘ್ರವೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದರು.

ಉತ್ತರಾಖಂಡ್, ತೆಲಂಗಾಣ, ಹರಿಯಾಣ, ಹಿಮಾಚಲ ಪ್ರದೇಶ ಸುದೀರ್ಘ ಹೋರಾಟದ ನಂತರ ಪ್ರತ್ಯೇಕ ರಾಜ್ಯಗಳಾಗಿವೆ. ಕೊಡಗು ಸ್ವಾಯತ್ತ ನಾಡು ಏಕೆ ಆಗಬಾರದು” ಎಂದು ಅವರು ಪ್ರಶ್ನಿಸಿದರು. ಮುಂದಿನ ವರ್ಷ ನವೆಂಬರ್ ವೇಳೆಗೆ ಪ್ರತ್ಯೇಕ ಕೊಡವ ಲ್ಯಾಂಡ್ ಘೋಷಣೆಯಾಗಲಿದೆ ಎಂದು ಭರವಸೆ ನೀಡಿದರು.

ಇದೇ ವೇಳೆ ಮೋದಿ ಆಡಳಿತದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಮೋದಿಯನ್ನು ವಿರೋಧಿಸುತ್ತಿಲ್ಲ. ಆದರೆ ಚೀನಾವನ್ನು ಓಲೈಸುವ ಅವರ ನೀತಿಯನ್ನು ನಾನು ವಿರೋಧಿಸುತ್ತೇನೆ. ಅವರು ಚೀನೀಯರಿಗೆ ನಮ್ಮ ಪ್ರದೇಶವನ್ನು ಆಕ್ರಮಿಸಲು ಬಿಡಬಾರದು. ಭಾರತ ಅವರ ವಿರುದ್ಧ ಹೋರಾಡಬೇಕು. ಈಗಿನ ಸರ್ಕಾರದ ಕೆಲವು ತಪ್ಪು ಆರ್ಥಿಕ ನೀತಿಗಳನ್ನೂ ನಾನು ವಿರೋಧಿಸುತ್ತೇನೆ. ಬಿಜೆಪಿಯಲ್ಲಿ ನನ್ನನ್ನು ಬಿಟ್ಟು ಬೇರೆ ಯಾರಿಗೂ ತಪ್ಪು ನೀತಿಗಳನ್ನು ಪ್ರಶ್ನಿಸುವ ತಾಕತ್ತು ಇಲ್ಲ. ನಾನು ಹಲವು ಬಾರಿ ಮನವಿ ಮಾಡಿದರೂ ರಾಮಸೇತುವನ್ನು ಪಾರಂಪರಿಕ ತಾಣ ಎಂದು ಘೋಷಿಸಲು ಪ್ರಧಾನಿ ವಿಫಲರಾಗಿದ್ದಾರೆ ಎಂದರು.

andolana

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

3 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

3 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

4 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

5 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

5 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

13 hours ago