ಜಿಲ್ಲೆಗಳು

ಯುವರಾಜ ಕಾಲೇಜಿನ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ಪೂರ್ಣ ಶುಲ್ಕ ಪಾವತಿ ಆದೇಶ ವಾಪಸ್ಸಿಗೆ ಆಗ್ರಹ

ಮೈಸೂರು: ವಿದ್ಯಾರ್ಥಿಗಳು ಕಾಲೇಜಿನ ಪೂರ್ಣ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬೇಕು ಎಂಬ ಸುತ್ತೋಲೆಯನ್ನು ಕೂಡಲೇ ಮೈಸೂರು ವಿಶ್ವವಿದ್ಯಾನಿಲಯ ಹಿಂಪಡೆಯಬೇಕು ಎಂದು ಆಗ್ರಹಿಸಿ ಯುವರಾಜ ಕಾಲೇಜಿನ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.

ಮಂಗಳವಾರ ಬೆಳಿಗ್ಗೆ ಯುವರಾಜ ಕಾಲೇಜು ಆವರಣದಲ್ಲಿ ಜವಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ವಿನಾಕಾರಣ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು.

ಈ ಹಿಂದೆ ಕಾಲೇಜು ಶುಲ್ಕವನ್ನು ಕಂತಿನ ರೂಪದಲ್ಲಿ ಪಾವತಿಸಲಾಗುತ್ತಿತ್ತು. ನಂತರ ವಿದ್ಯಾರ್ಥಿವೇತನ ಬರುತ್ತಿದ್ದ ಕಾರಣ ಆ ಹಣವನ್ನು ಒಟ್ಟುಗೂಡಿಸಿ ಶುಲ್ಕವನ್ನು ಪಾವತಿಸಲಾಗುತ್ತಿತ್ತು. ಆದರೆ, ಈ ಬಾರಿ ಪ್ರವೇಶಾತಿ ಶುಲ್ಕವನ್ನು ಹೆಚ್ಚಿಸಿರುವುದಲ್ಲದೆ. ಸಂಪೂರ್ಣ ಶುಲ್ಕವನ್ನು ಪಾವತಿಸಿ ಪ್ರವೇಶಾತಿ ಪಡೆಯಬೇಕು ಎಂದು ಷರತ್ತು ವಿಧಿಸಲಾಗಿದೆ. ಬಡ ಕುಟುಂಬದಿಂದ ಬಂದ ನಾವು ದಿಢೀರನೇ ೨೦ ಸಾವಿರ ರೂ. ಶುಲ್ಕವನ್ನು ಎಲ್ಲಿಂದ ತರುವುದು ಎಂದು ಪ್ರಶ್ನಿಸಿದರು.

ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವರಿಗೆ ಮನವಿ ಪತ್ರ ಸಲ್ಲಿಸಿದ ವಿದ್ಯಾರ್ಥಿಗಳು, ಶುಲ್ಕ ಪಾವತಿಗೆ ಸಮಯವಕಾಶ ನೀಡಬೇಕು. ಕಳೆದ ವರ್ಷದ ವಿದ್ಯಾರ್ಥಿವೇತನ ನೀಡಬೇಕು ಹಾಗೂ ಕಾಲೇಜು ಆರಂಭವನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.

ಮಹೇಶ್ ಕುವಾರ್, ಮಲ್ಲೇಶ್, ಪ್ರಜ್ವಲ್, ರಮೇಶ್, ರೂಪ, ಶಂಕರ್, ಹರೀಶ್, ರಾಜೇಶ್, ಕೃಷ್ಣ ಮುಂತಾದ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolana

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

2 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

3 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

4 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

5 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

12 hours ago