ಜಿಲ್ಲೆಗಳು

ಕಬ್ಬು ಬೆಳೆಗಾರರ ಬಂಧನ ಖಂಡಿಸಿ ಪ್ರತಿಭಟನೆ

ಮೈಸೂರು: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮತ್ತು ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಭಾನುವಾರ ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪುತ್ಥಳಿ ಬಳಿ ಜಮಾವಣೆಗೊಂಡ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಹಾಗೂ ರೈತರು, ಕಬ್ಬು ಬೆಳೆಗಾರರ ಸಂಘದ ಮುಖಂಡರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಕಳೆದ ೫ ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಅಹೋರಾತ್ರಿ ಧರಣಿಯನ್ನು ನಡೆಯುತ್ತಿತ್ತು. ಆದರೆ, ಸರ್ಕಾರ ಪೊಲೀಸರ ಮೂಲಕ ಧರಣಿಯನ್ನು ಹತ್ತಿಕ್ಕಿ ರಾಜ್ಯಾಧ್ಯಕ್ಷರು ಮತ್ತು ರೈತ ಮುಖಂಡರನ್ನು ಬಂಧಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಪ್ರತಿ ಟನ್ ಕಬ್ಬಿಗೆ ೩೦೫೦ ಎಫ್.ಆರ್.ಪಿ ದರವನ್ನು ನಿಗದಿ ಮಾಡಿದೆ. ಇದು ಅವೈಜ್ಞಾನಿಕ ಬೆಲೆ ಎಂದು ಖಂಡಿಸಿ ಬೆಂಗಳೂರನಲ್ಲಿ ಅಹೋರಾತ್ರಿ ಧರಣಿ ಕೈಗೊಂಡಿತ್ತು. ಆದರೆ, ಸರ್ಕಾರ ಪೊಲೀಸ್ ಬಲವನ್ನು ಬಳಸಿ ಧರಣಿ ನಿರತರನ್ನು ಬಂಧಿಸುವುದರ ಮೂಲಕ ರಾಜ್ಯದ ರೈತಾಪಿ ವರ್ಗಕ್ಕೆ ಅಪಮಾನ ಮಾಡಿದೆ ಎಂದರು.
ಕೇಂದ್ರ ಸರ್ಕಾರ ಭತ್ತಕ್ಕೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇವಲ ಮೂರು ಜಿಲ್ಲೆಗಳಿಗೆ ಮಾತ್ರ ಪ್ರತಿ ಕ್ವಿಂಟಾಲ್‌ಗೆ ೫೦೦ ರೂ. ಪ್ರೋತ್ಸಾಹ ಧನವನ್ನು ನೀಡುವುದರ ಮೂಲಕ ಉಳಿದ ಜಿಲ್ಲೆಯ ಭತ್ತ ಬೆಳೆಗಾರರಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಲಕ್ಷ್ಮೀಪುರ ವೆಂಕಟೇಶ್, ಕಾಟೂರು ಮಹದೇವಸ್ವಾಮಿ, ವರಕೋಡು ನಾಗೇಶ್, ಜಯರಾಮ್, ಬಸವರಾಜ್ ಸಾತಗಳ್ಳಿ, ರಾಜೇಶ್ ಹಂಪಾಪುರ, ದೇವಮಣಿ, ವಾಜಮಂಗಲ ಮಹದೇವು, ಜಯರಾಮು ಮುಂತಾದವರು ಭಾಗವಹಿಸಿದ್ದರು.

andolanait

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

3 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

26 mins ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

1 hour ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

2 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

2 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago