ಜಿಲ್ಲೆಗಳು

ಕಬ್ಬು ಬೆಳೆಗಾರರ ಬಂಧನ ಖಂಡಿಸಿ ಪ್ರತಿಭಟನೆ

ಮೈಸೂರು: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮತ್ತು ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಭಾನುವಾರ ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪುತ್ಥಳಿ ಬಳಿ ಜಮಾವಣೆಗೊಂಡ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಹಾಗೂ ರೈತರು, ಕಬ್ಬು ಬೆಳೆಗಾರರ ಸಂಘದ ಮುಖಂಡರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಕಳೆದ ೫ ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಅಹೋರಾತ್ರಿ ಧರಣಿಯನ್ನು ನಡೆಯುತ್ತಿತ್ತು. ಆದರೆ, ಸರ್ಕಾರ ಪೊಲೀಸರ ಮೂಲಕ ಧರಣಿಯನ್ನು ಹತ್ತಿಕ್ಕಿ ರಾಜ್ಯಾಧ್ಯಕ್ಷರು ಮತ್ತು ರೈತ ಮುಖಂಡರನ್ನು ಬಂಧಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಪ್ರತಿ ಟನ್ ಕಬ್ಬಿಗೆ ೩೦೫೦ ಎಫ್.ಆರ್.ಪಿ ದರವನ್ನು ನಿಗದಿ ಮಾಡಿದೆ. ಇದು ಅವೈಜ್ಞಾನಿಕ ಬೆಲೆ ಎಂದು ಖಂಡಿಸಿ ಬೆಂಗಳೂರನಲ್ಲಿ ಅಹೋರಾತ್ರಿ ಧರಣಿ ಕೈಗೊಂಡಿತ್ತು. ಆದರೆ, ಸರ್ಕಾರ ಪೊಲೀಸ್ ಬಲವನ್ನು ಬಳಸಿ ಧರಣಿ ನಿರತರನ್ನು ಬಂಧಿಸುವುದರ ಮೂಲಕ ರಾಜ್ಯದ ರೈತಾಪಿ ವರ್ಗಕ್ಕೆ ಅಪಮಾನ ಮಾಡಿದೆ ಎಂದರು.
ಕೇಂದ್ರ ಸರ್ಕಾರ ಭತ್ತಕ್ಕೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇವಲ ಮೂರು ಜಿಲ್ಲೆಗಳಿಗೆ ಮಾತ್ರ ಪ್ರತಿ ಕ್ವಿಂಟಾಲ್‌ಗೆ ೫೦೦ ರೂ. ಪ್ರೋತ್ಸಾಹ ಧನವನ್ನು ನೀಡುವುದರ ಮೂಲಕ ಉಳಿದ ಜಿಲ್ಲೆಯ ಭತ್ತ ಬೆಳೆಗಾರರಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಲಕ್ಷ್ಮೀಪುರ ವೆಂಕಟೇಶ್, ಕಾಟೂರು ಮಹದೇವಸ್ವಾಮಿ, ವರಕೋಡು ನಾಗೇಶ್, ಜಯರಾಮ್, ಬಸವರಾಜ್ ಸಾತಗಳ್ಳಿ, ರಾಜೇಶ್ ಹಂಪಾಪುರ, ದೇವಮಣಿ, ವಾಜಮಂಗಲ ಮಹದೇವು, ಜಯರಾಮು ಮುಂತಾದವರು ಭಾಗವಹಿಸಿದ್ದರು.

andolanait

Recent Posts

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

21 mins ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

27 mins ago

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

2 hours ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

2 hours ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

2 hours ago

ಓದುಗರ ಪತ್ರ: ಬಂಡಿಪಾಳ್ಯದಲ್ಲಿ ಅಗತ್ಯ ಶೌಚಾಲಯಗಳನ್ನು ನಿರ್ಮಿಸಿ

ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…

2 hours ago