ಜಿಲ್ಲೆಗಳು

ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳಕ್ಕೆ ಆಗ್ರಹ

ಕಬ್ಬು ಬೆಳೆಗಾರರ ಸಂಘ ಮುಖಂಡರಿoದ ಪ್ರತಿಭಟನೆ 

ಚಾಮರಾಜನಗರ: ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸೋಮವಾರ ಬೆಳಗ್ಗೆ ಚಾಮರಾಜೇಶ್ವರ ದೇವಾಲಯದ ಮುಂಭಾಗದಿAದ ಮೆರವಣಿಗೆ ಹೊರಟ ಮುಖಂಡರು, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನ ತಲುಪಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ, ಸಂಸದರು, ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ರಾಜ್ಯದಲ್ಲಿ ೩೦ ಲಕ್ಷ ಕಬ್ಬು ಬೆಳೆಗಾರರಿದ್ದಾರೆ. ಕರ್ನಾಟಕ ರಾಜ್ಯಕ್ಕಿಂತ ಸಕ್ಕರೆ ಇಳುವರಿ ಕಡಿಮೆ ಬರುವ ಪಂಜಾಬ್‌ನಲ್ಲಿ ಟನ್ ಕಬ್ಬಿಗೆ ೩೮೦೦ ರೂ., ಉತ್ತರ ಪ್ರದೇಶದಲ್ಲಿ ೩೫೦೦ ರೂ., ಗುಜರಾತ್‌ನಲ್ಲಿ ೪೪೦೦ ರೂ. ದರ ನಿಗದಿ ಮಾಡಿದ್ದಾರೆ ಇದನ್ನು ಗಮನಿಸಿ ರಾಜ್ಯದಲ್ಲೂ ಎಫ್‌ಆರ್‌ಪಿ ಬೆಲೆಯನ್ನು ಕನಿಷ್ಠ ೩೫೦೦ ರೂ.ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
ಕಬ್ಬು ಕಟಾವು ಮಾಡದೆ ೧೬ ತಿಂಗಳಾಗುತ್ತಿದೆ. ರಾಜ್ಯ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯಂತೆ ರೈತನ ಜಮೀನಿನಿಂದ ಕಾರ್ಖಾನೆ ನಡುವೆ ಇರುವ ಕಿ.ಮೀ. ಆಧಾರದ ದರ ಕಡಿತ ಮಾಡಬೇಕು ಎಂದರು.
ರೈತ ಮತ್ತು ಕಾರ್ಖಾನೆ ನಡುವೆ ಸರ್ಕಾರ ಜಾರಿಗೆ ತಂದಿರುವ ದ್ವಿಪಕ್ಷೀಯ ಒಪ್ಪಂದ ಪತ್ರ ಜಾರಿ ಮಾಡಬೇಕು. ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಕೃಷಿ ಪಂಪ್‌ಸೆಟ್‌ಗೆ ಮೀಟರ್ ಅಳವಡಿಸಕೂಡದು ಎಂದು ಒತ್ತಾಯಿಸಿದರು.
ಬ್ಯಾಂಕ್‌ಗಳು ರೈತರಿಗೆ ಸಾಲ ನೀಡುವಾಗ ಸಿಬಿಲ್ ಸ್ಕೋರ್ ಪರಿಗಣಿಸಬಾರದು. ಸರ್ಕಾರ ನೀಡುವ ಪರಿಹಾರ, ಪ್ರೋತ್ಸಾಹ ಧನ, ವಿಧವಾ ವೇತನ, ವೃದ್ಧಾಪ್ಯ ವೇತನದ ಹಣವನ್ನು ಸಾಲದ ಖಾತೆಗಳಿಗೆ ಜಮಾ ಮಾಡಬಾರದು ಎಂದು ಒತ್ತಾಯಿಸಿದರು.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

11 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago