ಜಿಲ್ಲೆಗಳು

ವಿದ್ಯುತ್‌ ಅವಘಡದಿಂದ ಕಬ್ಬಿನ ಗದ್ದೆಗೆ ಬೆಂಕಿ : ರಸ್ತೆ ತಡೆದು ರೈತರ ಪ್ರತಿಭಟನೆ

ಹನೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 20 ಎಕರೆಗೂ ಹೆಚ್ಚು ಕಬ್ಬು ಹಾಗೂ 150 ಕ್ಕೂ ಹೆಚ್ಚು ತೆಂಗಿನ ಮರ ಬೆಂಕಿಗೆ ಆಹುತಿಯಾಗಿರುವುದನ್ನು ಖಂಡಿಸಿ ಲೊಕನಹಳ್ಳಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಜರುಗಿದೆ.

ಲೊಕ್ಕನಹಳ್ಳಿ ಗ್ರಾಮದ ಮೇಲು ಸ್ವಾಮಿ, ರುಕ್ಮಿಣಿ, ಸತೀಶ್ ಕುಮಾರ್ ರವರು ತಮ್ಮ ಜಮೀನುಗಳಲ್ಲಿ ಕಬ್ಬು ಬೆಳೆದಿದ್ದರು. ಕಬ್ಬು ಬೆಳೆದು 18 ತಿಂಗಳಾಗಿದ್ದರೂ ಸಹ ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆಯವರು ಕಬ್ಬು ಕಟಾವು ಮಾಡದೇ ಇರುವುದರಿಂದ ಈ ದುರ್ಘಟನೆ ನಡೆದಿದೆ. ನಮ್ಮ ಈ ನಷ್ಟಕ್ಕೆ ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆ ಅವರು ಪರಿಹಾರ ನೀಡಬೇಕು. ಚಾಮರಾಜನಗರ ಜಿಲ್ಲಾಧಿಕಾರಿಗಳು,ಜಿಲ್ಲಾ ಉಸ್ತುವಾರಿ ಸಚಿವರು ತಹಸಿಲ್ದಾರ್ ರವರು ಸ್ಥಳಕ್ಕೆ ಆಗಮಿಸಿ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಬೇಕು ಇಲ್ಲದಿದ್ದರೆ ಸ್ಥಳದಲ್ಲೇ ಸೀಮೆಎಣ್ಣೆ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತ ಸತೀಶ್ ಕುಮಾರ್ ಮಾತನಾಡಿ ನಾವು ಕಬ್ಬು ಬೆಳೆದು 18 ತಿಂಗಳಗಳಾಗಿದೆ ಆದರೂ ಸಹ ಇದುವರೆಗೂ ಕಬ್ಬು ಕಟಾವು ಮಾಡಿಲ್ಲ, ಈ ಘಟನೆಗೆ ಬಣ್ಣಾರಿ ಅಮ್ಮನ ಕಾರ್ಖಾನೆಯವರೇ ನೇರ ಹೊಣೆ, ಜಮೀನಿನಲ್ಲಿದ್ದ ಹನಿ ನೀರಾವರಿ ಪೈಪ್, ಸ್ಟಾರ್ಟರ್, ಸ್ಪಿಂಕ್ಲರ್ ಪೈಪ್, ಮೋಟಾರ್ ಕೇಬಲ್ ಗಳು ಸುಟ್ಟು ಹೋಗಿ ಸುಮಾರು 20 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಸಂಬಂಧಿಸಿದವರು ಸ್ಥಳಕ್ಕಾಗಿ ಸೂಕ್ತ ಪರಿಹಾರ ಕೊಡದಿದ್ದರೆ ಅಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.  ರೈತ ಮುತ್ತುವೇಲ್ ಮಾತನಾಡಿ ಲೋಕನಹಳ್ಳಿ ಭಾಗದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ರೈತರು ಕಬ್ಬು ಬೆಳೆದಿದ್ದೇವೆ. 18 ತಿಂಗಳುಗಳಾದರು ಕಬ್ಬು ಕಟಾವು ಮಾಡಿಲ್ಲ ಇದರಿಂದ ನಮಗೆ ನಷ್ಟ ಉಂಟಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಟ್ರಾಫಿಕ್ ಜಾಮ್ : ಲೊಕ್ಕನಹಳ್ಳಿ ಗ್ರಾಮದ ರೈತರುಗಳ ಇಪ್ಪತ್ತಕ್ಕೂ ಹೆಚ್ಚು ಎಕರೆ ಕಬ್ಬು, ಬೆಂಕಿಗಹುತಿಯಾಗಿರುವುದನ್ನು ಖಂಡಿಸಿ ಲೋಕನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಶಾಮಿಯಾನ ಹಾಕಿ ಪ್ರತಿಭಟಿಸುತ್ತಿದ್ದ ಹಿನ್ನೆಲೆ ನೂರಾರುವಾಹನಗಳು ನಿಂತಲ್ಲೇ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಯಿತು. ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದರಿಂದ ತರಕಾರಿ ವಾಹನಗಳು ಬಸ್ ಗಳು, ದ್ವಿಚಕ್ರ ವಾಹನ, ಕಾರುಗಳು ಸುಮಾರು ಒಂದು ಕಿಲೋಮೀಟರ್ ವರೆಗೂ ವಾಹನಗಳು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

9 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

9 hours ago