ಜಿಲ್ಲೆಗಳು

ಸಚಿವ ಎಸ್‌ಟಿಎಸ್‌ಗೆ ಘೇರಾವ್ ಹಾಕಿದ ಕಬ್ಬು ಬೆಳೆಗಾರರು

ಮೈಸೂರು: ಮೈಸೂರು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಕಬ್ಬು ಬೆಳೆಗಾರರು ಘೇರಾವ್ ಹಾಕಿದರು.

ಮುಕ್ತಗಂಗೋತ್ರಿಯಲ್ಲಿ ಧಿಕ್ಕಾರ ಕೂಗುತ್ತಾ ಸಚಿವರನ್ನು ಅಡ್ಡಗಟ್ಟಿದ್ದರು. ಆಗ ಮಧ್ಯಪ್ರವೇಶಿಸಿದ ಪೊಲೀಸರು ರೈತರನ್ನು ಬಂಧಿಸಿದರು. ಇದರಿಂದ ಆಕ್ರೋಶಗೊಂಡ ರೈತರು ಘೋಷಣೆ ಕೂಗಿದರು.

ಸುಮಾರು ೧೦ ದಿನಗಳ ಕಾಲ ಜಿಲ್ಲಾಧಿಕಾರಿ ಕಚೇರಿ ಬಳಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಕಬ್ಬು ಬೆಳೆಗಾರರು, ಬಗರ್ ಹುಕುಂ ಸಾಗುವಳಿದಾರರು ವಿವಿಧ ಬೇಡಿಕೆ ಈಡೇರಿಕೆಗಾಗಿ ಅಹೋರಾತ್ರಿ ಧರಣಿ ನಡೆಸಿದ್ದು, ಸಚಿವರು ಸೌಜನ್ಯಕ್ಕಾದರೂ ರೈತರನ್ನು ಭೇಟಿ ಮಾಡಲಿಲ್ಲ. ಅದಕ್ಕೆ ಅವರಿಗೆ ಮುತ್ತಿಗೆ ಹಾಕುವ ಮೂಲಕ ಎಚ್ಚರಿಸಿದ್ದೇವೆ. ಕೂಡಲೇ ಎಚ್ಚೆತ್ತುಕೊಂಡು ಕಬ್ಬು ಬೆಳೆಗಾರ ರೈತರ ಕುಂದುಕೊರತೆಗಳ ಪರಿಹರಿಸಲು ಸಭೆ ಕರೆಯಬೇಕು. ಇಲ್ಲವಾದರೆ, ಜಿಲ್ಲೆಗೆ ಯಾವುದೇ ಕಾರ್ಯಕ್ರಮಕ್ಕೆ ಬಂದರೂ ಸಹ ಇನ್ನೂ ವಿಭಿನ್ನ ರೀತಿಯಲ್ಲಿ ಸಚಿವರಿಗೆ ಪ್ರತಿಭಟನೆಯ ಬಿಸಿಯನ್ನು ಮುಟ್ಟಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಬಿ. ಪಿ. ಪರಶಿವಮೂರ್ತಿ, ಅಂಬಳೆ ಮಂಜುನಾಥ್, ಡಿ. ಕಾಟೂರು ಮಾದೇವಸ್ವಾಮಿ, ಕಿರಗಸೂರು ಪ್ರಸಾದ್ ನಾಯಕ, ವರಕೋಡು ನಾಗೇಶ್, ಚುಂಚುರಾಯನ ಹುಂಡಿ ಸತೀಶ್, ಹಿರಿಯೂರು ರಾಜೇಶ್ ಮುಂತಾದವರು ಪಾಲ್ಗೊಂಡಿದ್ದರು.

 

 

 

andolana

Recent Posts

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

18 mins ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

28 mins ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

1 hour ago

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

5 hours ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

5 hours ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

5 hours ago