ಮೈಸೂರು: ಮೈಸೂರು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಕಬ್ಬು ಬೆಳೆಗಾರರು ಘೇರಾವ್ ಹಾಕಿದರು.
ಮುಕ್ತಗಂಗೋತ್ರಿಯಲ್ಲಿ ಧಿಕ್ಕಾರ ಕೂಗುತ್ತಾ ಸಚಿವರನ್ನು ಅಡ್ಡಗಟ್ಟಿದ್ದರು. ಆಗ ಮಧ್ಯಪ್ರವೇಶಿಸಿದ ಪೊಲೀಸರು ರೈತರನ್ನು ಬಂಧಿಸಿದರು. ಇದರಿಂದ ಆಕ್ರೋಶಗೊಂಡ ರೈತರು ಘೋಷಣೆ ಕೂಗಿದರು.
ಸುಮಾರು ೧೦ ದಿನಗಳ ಕಾಲ ಜಿಲ್ಲಾಧಿಕಾರಿ ಕಚೇರಿ ಬಳಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಕಬ್ಬು ಬೆಳೆಗಾರರು, ಬಗರ್ ಹುಕುಂ ಸಾಗುವಳಿದಾರರು ವಿವಿಧ ಬೇಡಿಕೆ ಈಡೇರಿಕೆಗಾಗಿ ಅಹೋರಾತ್ರಿ ಧರಣಿ ನಡೆಸಿದ್ದು, ಸಚಿವರು ಸೌಜನ್ಯಕ್ಕಾದರೂ ರೈತರನ್ನು ಭೇಟಿ ಮಾಡಲಿಲ್ಲ. ಅದಕ್ಕೆ ಅವರಿಗೆ ಮುತ್ತಿಗೆ ಹಾಕುವ ಮೂಲಕ ಎಚ್ಚರಿಸಿದ್ದೇವೆ. ಕೂಡಲೇ ಎಚ್ಚೆತ್ತುಕೊಂಡು ಕಬ್ಬು ಬೆಳೆಗಾರ ರೈತರ ಕುಂದುಕೊರತೆಗಳ ಪರಿಹರಿಸಲು ಸಭೆ ಕರೆಯಬೇಕು. ಇಲ್ಲವಾದರೆ, ಜಿಲ್ಲೆಗೆ ಯಾವುದೇ ಕಾರ್ಯಕ್ರಮಕ್ಕೆ ಬಂದರೂ ಸಹ ಇನ್ನೂ ವಿಭಿನ್ನ ರೀತಿಯಲ್ಲಿ ಸಚಿವರಿಗೆ ಪ್ರತಿಭಟನೆಯ ಬಿಸಿಯನ್ನು ಮುಟ್ಟಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಬಿ. ಪಿ. ಪರಶಿವಮೂರ್ತಿ, ಅಂಬಳೆ ಮಂಜುನಾಥ್, ಡಿ. ಕಾಟೂರು ಮಾದೇವಸ್ವಾಮಿ, ಕಿರಗಸೂರು ಪ್ರಸಾದ್ ನಾಯಕ, ವರಕೋಡು ನಾಗೇಶ್, ಚುಂಚುರಾಯನ ಹುಂಡಿ ಸತೀಶ್, ಹಿರಿಯೂರು ರಾಜೇಶ್ ಮುಂತಾದವರು ಪಾಲ್ಗೊಂಡಿದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…