ಮೈಸೂರು: ಮೈಸೂರು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಕಬ್ಬು ಬೆಳೆಗಾರರು ಘೇರಾವ್ ಹಾಕಿದರು.
ಮುಕ್ತಗಂಗೋತ್ರಿಯಲ್ಲಿ ಧಿಕ್ಕಾರ ಕೂಗುತ್ತಾ ಸಚಿವರನ್ನು ಅಡ್ಡಗಟ್ಟಿದ್ದರು. ಆಗ ಮಧ್ಯಪ್ರವೇಶಿಸಿದ ಪೊಲೀಸರು ರೈತರನ್ನು ಬಂಧಿಸಿದರು. ಇದರಿಂದ ಆಕ್ರೋಶಗೊಂಡ ರೈತರು ಘೋಷಣೆ ಕೂಗಿದರು.
ಸುಮಾರು ೧೦ ದಿನಗಳ ಕಾಲ ಜಿಲ್ಲಾಧಿಕಾರಿ ಕಚೇರಿ ಬಳಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಕಬ್ಬು ಬೆಳೆಗಾರರು, ಬಗರ್ ಹುಕುಂ ಸಾಗುವಳಿದಾರರು ವಿವಿಧ ಬೇಡಿಕೆ ಈಡೇರಿಕೆಗಾಗಿ ಅಹೋರಾತ್ರಿ ಧರಣಿ ನಡೆಸಿದ್ದು, ಸಚಿವರು ಸೌಜನ್ಯಕ್ಕಾದರೂ ರೈತರನ್ನು ಭೇಟಿ ಮಾಡಲಿಲ್ಲ. ಅದಕ್ಕೆ ಅವರಿಗೆ ಮುತ್ತಿಗೆ ಹಾಕುವ ಮೂಲಕ ಎಚ್ಚರಿಸಿದ್ದೇವೆ. ಕೂಡಲೇ ಎಚ್ಚೆತ್ತುಕೊಂಡು ಕಬ್ಬು ಬೆಳೆಗಾರ ರೈತರ ಕುಂದುಕೊರತೆಗಳ ಪರಿಹರಿಸಲು ಸಭೆ ಕರೆಯಬೇಕು. ಇಲ್ಲವಾದರೆ, ಜಿಲ್ಲೆಗೆ ಯಾವುದೇ ಕಾರ್ಯಕ್ರಮಕ್ಕೆ ಬಂದರೂ ಸಹ ಇನ್ನೂ ವಿಭಿನ್ನ ರೀತಿಯಲ್ಲಿ ಸಚಿವರಿಗೆ ಪ್ರತಿಭಟನೆಯ ಬಿಸಿಯನ್ನು ಮುಟ್ಟಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಬಿ. ಪಿ. ಪರಶಿವಮೂರ್ತಿ, ಅಂಬಳೆ ಮಂಜುನಾಥ್, ಡಿ. ಕಾಟೂರು ಮಾದೇವಸ್ವಾಮಿ, ಕಿರಗಸೂರು ಪ್ರಸಾದ್ ನಾಯಕ, ವರಕೋಡು ನಾಗೇಶ್, ಚುಂಚುರಾಯನ ಹುಂಡಿ ಸತೀಶ್, ಹಿರಿಯೂರು ರಾಜೇಶ್ ಮುಂತಾದವರು ಪಾಲ್ಗೊಂಡಿದ್ದರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…