ಮೈಸೂರು: ಮೈಸೂರು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಕಬ್ಬು ಬೆಳೆಗಾರರು ಘೇರಾವ್ ಹಾಕಿದರು.
ಮುಕ್ತಗಂಗೋತ್ರಿಯಲ್ಲಿ ಧಿಕ್ಕಾರ ಕೂಗುತ್ತಾ ಸಚಿವರನ್ನು ಅಡ್ಡಗಟ್ಟಿದ್ದರು. ಆಗ ಮಧ್ಯಪ್ರವೇಶಿಸಿದ ಪೊಲೀಸರು ರೈತರನ್ನು ಬಂಧಿಸಿದರು. ಇದರಿಂದ ಆಕ್ರೋಶಗೊಂಡ ರೈತರು ಘೋಷಣೆ ಕೂಗಿದರು.
ಸುಮಾರು ೧೦ ದಿನಗಳ ಕಾಲ ಜಿಲ್ಲಾಧಿಕಾರಿ ಕಚೇರಿ ಬಳಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಕಬ್ಬು ಬೆಳೆಗಾರರು, ಬಗರ್ ಹುಕುಂ ಸಾಗುವಳಿದಾರರು ವಿವಿಧ ಬೇಡಿಕೆ ಈಡೇರಿಕೆಗಾಗಿ ಅಹೋರಾತ್ರಿ ಧರಣಿ ನಡೆಸಿದ್ದು, ಸಚಿವರು ಸೌಜನ್ಯಕ್ಕಾದರೂ ರೈತರನ್ನು ಭೇಟಿ ಮಾಡಲಿಲ್ಲ. ಅದಕ್ಕೆ ಅವರಿಗೆ ಮುತ್ತಿಗೆ ಹಾಕುವ ಮೂಲಕ ಎಚ್ಚರಿಸಿದ್ದೇವೆ. ಕೂಡಲೇ ಎಚ್ಚೆತ್ತುಕೊಂಡು ಕಬ್ಬು ಬೆಳೆಗಾರ ರೈತರ ಕುಂದುಕೊರತೆಗಳ ಪರಿಹರಿಸಲು ಸಭೆ ಕರೆಯಬೇಕು. ಇಲ್ಲವಾದರೆ, ಜಿಲ್ಲೆಗೆ ಯಾವುದೇ ಕಾರ್ಯಕ್ರಮಕ್ಕೆ ಬಂದರೂ ಸಹ ಇನ್ನೂ ವಿಭಿನ್ನ ರೀತಿಯಲ್ಲಿ ಸಚಿವರಿಗೆ ಪ್ರತಿಭಟನೆಯ ಬಿಸಿಯನ್ನು ಮುಟ್ಟಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಬಿ. ಪಿ. ಪರಶಿವಮೂರ್ತಿ, ಅಂಬಳೆ ಮಂಜುನಾಥ್, ಡಿ. ಕಾಟೂರು ಮಾದೇವಸ್ವಾಮಿ, ಕಿರಗಸೂರು ಪ್ರಸಾದ್ ನಾಯಕ, ವರಕೋಡು ನಾಗೇಶ್, ಚುಂಚುರಾಯನ ಹುಂಡಿ ಸತೀಶ್, ಹಿರಿಯೂರು ರಾಜೇಶ್ ಮುಂತಾದವರು ಪಾಲ್ಗೊಂಡಿದ್ದರು.
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…