ಮೈಸೂರು: ಮೈಸೂರು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಕಬ್ಬು ಬೆಳೆಗಾರರು ಘೇರಾವ್ ಹಾಕಿದರು.
ಮುಕ್ತಗಂಗೋತ್ರಿಯಲ್ಲಿ ಧಿಕ್ಕಾರ ಕೂಗುತ್ತಾ ಸಚಿವರನ್ನು ಅಡ್ಡಗಟ್ಟಿದ್ದರು. ಆಗ ಮಧ್ಯಪ್ರವೇಶಿಸಿದ ಪೊಲೀಸರು ರೈತರನ್ನು ಬಂಧಿಸಿದರು. ಇದರಿಂದ ಆಕ್ರೋಶಗೊಂಡ ರೈತರು ಘೋಷಣೆ ಕೂಗಿದರು.
ಸುಮಾರು ೧೦ ದಿನಗಳ ಕಾಲ ಜಿಲ್ಲಾಧಿಕಾರಿ ಕಚೇರಿ ಬಳಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಕಬ್ಬು ಬೆಳೆಗಾರರು, ಬಗರ್ ಹುಕುಂ ಸಾಗುವಳಿದಾರರು ವಿವಿಧ ಬೇಡಿಕೆ ಈಡೇರಿಕೆಗಾಗಿ ಅಹೋರಾತ್ರಿ ಧರಣಿ ನಡೆಸಿದ್ದು, ಸಚಿವರು ಸೌಜನ್ಯಕ್ಕಾದರೂ ರೈತರನ್ನು ಭೇಟಿ ಮಾಡಲಿಲ್ಲ. ಅದಕ್ಕೆ ಅವರಿಗೆ ಮುತ್ತಿಗೆ ಹಾಕುವ ಮೂಲಕ ಎಚ್ಚರಿಸಿದ್ದೇವೆ. ಕೂಡಲೇ ಎಚ್ಚೆತ್ತುಕೊಂಡು ಕಬ್ಬು ಬೆಳೆಗಾರ ರೈತರ ಕುಂದುಕೊರತೆಗಳ ಪರಿಹರಿಸಲು ಸಭೆ ಕರೆಯಬೇಕು. ಇಲ್ಲವಾದರೆ, ಜಿಲ್ಲೆಗೆ ಯಾವುದೇ ಕಾರ್ಯಕ್ರಮಕ್ಕೆ ಬಂದರೂ ಸಹ ಇನ್ನೂ ವಿಭಿನ್ನ ರೀತಿಯಲ್ಲಿ ಸಚಿವರಿಗೆ ಪ್ರತಿಭಟನೆಯ ಬಿಸಿಯನ್ನು ಮುಟ್ಟಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಬಿ. ಪಿ. ಪರಶಿವಮೂರ್ತಿ, ಅಂಬಳೆ ಮಂಜುನಾಥ್, ಡಿ. ಕಾಟೂರು ಮಾದೇವಸ್ವಾಮಿ, ಕಿರಗಸೂರು ಪ್ರಸಾದ್ ನಾಯಕ, ವರಕೋಡು ನಾಗೇಶ್, ಚುಂಚುರಾಯನ ಹುಂಡಿ ಸತೀಶ್, ಹಿರಿಯೂರು ರಾಜೇಶ್ ಮುಂತಾದವರು ಪಾಲ್ಗೊಂಡಿದ್ದರು.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…