ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ಕಿತ್ತಾಟ ಇದೀಗ ಸುಪ್ರೀಂ ಹಂತದವರೆಗೂ ತಲುಪಿದೆ. ಡಿ ರೂಪಾ ಅವರು ರೋಹಿಣಿ ಸಿಂಧೂರಿ ಅವರ ಆಕ್ಷೇಪಾರ್ಹ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹೀಗಾಗಿ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಈ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಬೇಕೆಂದು ಡಿ ರೂಪಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ. ರೂಪಾ ಪರ ವಾದ ಮಂಡಿಸಿದ ವಕೀಲರು ರೋಹಿಣಿ ಸಿಂಧೂರಿ ಅವರು ಪುರುಷ ಅಧಿಕಾರಿಗಳಿಗೆ ತಮ್ಮ ಫೋಟೊಗಳನ್ನು ಕಳುಹಿಸುತ್ತಾರೆ ಎಂದು ಆರೋಪಿಸಿದರು.
ಈ ವೇಳೆ ಮಧ್ಯ ಪ್ರವೇಶಿಸಿದ ಸುಪ್ರೀಂ ಕೋರ್ಟ್ ಈ ರೀತಿಯ ವಾದಗಳನ್ನು ಆಲಿಸಿ ನಾವು ನಿಮ್ಮ ಅರ್ಜಿಯನ್ನು ಪರಿಗಣಿಸುತ್ತೇವೆ ಎಂದು ಭಾವಿಸಬೇಡಿ ಎಂದಿದೆ. ನಾವು ಇಲ್ಲಿ ಸರ್ಕಾರ ನಡೆಸುತ್ತಿಲ್ಲ ಹಾಗೂ ನ್ಯಾಯಾಲಯದಲ್ಲಿ ಭಾವನೆಗಳಿಗೆ ಬೆಲೆಯಿಲ್ಲ ಎಂಬುದನ್ನು ಇಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿತು.
ಬಳಿಕ ತನ್ನ ತೀರ್ಮಾನವನ್ನು ಪ್ರಕಟಿಸಿದ ಸುಪ್ರೀಂ ನಾಳೆ ಒಳಗೆ ರೋಹಿಣಿ ಸಿಂಧೂರಿ ಕುರಿತು ಪ್ರಕಟಿಸಿರುವ ಪೋಸ್ಟ್ ಡಿಲೀಟ್ ಮಾಡಿ, ಪೋಸ್ಟ್ ಡಿಲೀಟ್ ಮಾಡಲು ಇಷ್ಟವಿಲ್ಲವಾದರೆ ಪೋಸ್ಟ್ ಹಿಂಪಡೆಯಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಕಟಿಸಬಹುದು ಎಂದು ತಿಳಿಸಿದರು.
ಏನಿದು ಆಕ್ಷೇಪಾರ್ಹ ಪೋಸ್ಟ್?
ಇದೇ ವರ್ಷದ ಫೆಬ್ರವರಿ 14 ಹಾಗೂ 16ರಂದು ಐಪಿಎಸ್ ಅಧಿಕಾರಿ ಡಿ ರೂಪಾ ಅವರು ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ರೋಹಿಣಿ ಸಿಂಧೂರಿ ಅವರ ಫೋಟೊಗಳನ್ನು ಹಂಚಿಕೊಂಡು ಹಲವು ಆರೋಪಗಳನ್ನು ಮಾಡಿದ್ದರು. ಈ ಆರೋಪಗಳು ತುಂಬಾ ಕೀಳು ಮಟ್ಟದಲ್ಲಿವೆ ಎಂದು ಆಕ್ರೋಶ ಹೊರಹಾಕಿದ್ದ ರೋಹಿಣಿ ಸಿಂಧೂರಿ ಕ್ರಿಮಿನಲ್ ಮೊಕದ್ದಮೆ ಹೂಡಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…