ಮಡಿಕೇರಿ: ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆಯ ಅಂಗವಾಗಿ ಗೋಣಿಕೊಪ್ಪಲಿನ ಸಂಪೂರ್ಣ ಸ್ವಾಸ್ಥ್ಯ ಯೋಗ ಕೇಂದ್ರದ ವತಿಯಿಂದ ಜ.12 ರಂದು ‘ಸೂರ್ಯ ನಮಸ್ಕಾರ ಚಾಲೆಂಜ್’ ಸ್ಪರ್ಧೆ ನಡೆಯಲಿದೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೈಕೇರಿಯ ಶ್ರೀ ಭಗವತಿ ದೇವಾಲಯದಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಸ್ಪರ್ಧೆಯನ್ನು ಉದ್ಯಮಿ ಜಿ.ಲಕ್ಷ್ಮಿ ರೆಡ್ಡಿ ಉದ್ಘಾಟಿಸುವುರು. ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸುವರು. ಗೋಣಿಕೊಪ್ಪಲು ಗ್ರಾ.ಪಂ. ಅಧ್ಯಕ್ಷರಾದ ಸೌಮ್ಯ ಬಾಲು ಅಧ್ಯಕ್ಷತೆ ವಹಿಸುವುರು.
ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲು ಉಮಾಮಹೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ಡಾ.ಕೆ.ಎನ್.ಚಂದ್ರಶೇಖರ್, ಅಂತರರಾಷ್ಟ್ರೀಯ ಯೋಗಪಟು ಅಮೃತ್ ರಾಕೇಶ್, ಹಾತೂರು ಗ್ರಾ.ಪಂ. ಅಧ್ಯಕ್ಷ ಗುಮ್ಮಟ್ಟೀರ ದರ್ಶನ್ ನಂಜಪ್ಪ, ನ್ಯಾಷನಲ್ ಅಕಾಡೆಮಿ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಶಾಂತಿ ಅಚ್ಚಪ್ಪ, ಪೊನ್ನಂಪೇಟೆ ನಾಗರಿಕರ ವೇದಿಕೆ ಮಾಜಿ ಅಧ್ಯಕ್ಷ ಪೋಕುಳಚಂಡ ಬಿ.ಪೂಣಚ್ಚ ಪಾಲ್ಗೊಳ್ಳುವರು.
ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಮೊ.ಸಂ.೭೦೦೯೮೬೫೧೧೯, ೭೫೫೮೫೪೦೮೦೧ನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…
ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ ಸಂಜೆಯ ವೇಳೆ ಸಾಕಷ್ಟು ಬಸ್ಗಳಿಲ್ಲದೆ…
ಸೇಡು.. ಕೇಡು ! ಯುದ್ಧವೆಂದರೆ ಏನಿದೆ ಅದರಲ್ಲಿ.. ದೇಶ-ದೇಶಗಳ ನಡುವೆ ಬರೀ ದ್ವೇಷ, ಸೇಡು ಭರಿಸಲಾಗದ ಕೇಡು ಗೆದ್ದವರ ಹಾಡು…
ದೇಶದಲ್ಲಿ ಸಾವಿರಾರು ಯುವಕರು ವಿದ್ಯಾವಂತರಾಗಿದ್ದರೂ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಕೇಂದ್ರ ಹಾಗೂ ರಾಜ್ಯ…
ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…