ಮೈಸೂರು: ಸೂರ್ಯಗ್ರಹಣ ಕಾರಣದಿಂದ ನಗರದ ಬಹುತೇಕ ಮಂದಿ ಮಂಗಳವಾರ ಮಧ್ಯಾಹ್ನದ ನಂತರ ಹೊರಗೆ ಬಾರದೆ ಮನೆಯಲ್ಲೇ ಇದ್ದರೆ, ಹಲವು ಪ್ರಗತಿಪರರು ಬೀದಿಗೇ ಬಂದು ಆರಾಮವಾಗಿ ಉಪಾಹಾರ ಸೇವಿಸಿದರು!
ನಗರದ ಅಶೋಕಪುರಂ ಸನಿಹದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದ ಬಳಿ ಇರುವ ಚೈತ್ರ ಮಿಲ್ಕ್ ಸೆಂಟರ್ ಮುಂಭಾಗದಲ್ಲಿ ಸೂರ್ಯಗ್ರಹಣ ಪ್ರಕ್ರಿಯೆ ಸಮಯದಲ್ಲೇ ಲೇಖಕ ಸಿದ್ದಸ್ವಾಮಿ ಅವರ ನೇತೃತ್ವದಲ್ಲಿ ಜಮಾವಣೆಗೊಂಡ ಹಲವು ಪ್ರಗತಿಪರರು, ಉಪ್ಪಿಟ್ಟು, ಕೇಸರಿಬಾತ್ ಸೇವಿಸಿದರು.
ಸೂರ್ಯಗ್ರಹಣ ಸಮಯದಲ್ಲಿ ಮನೆಯಿಂದ ಹೊರಗೆ ಹೋಗಬಾರದು, ಆಹಾರ ಸೇವಿಸಬಾರದು ಎಂಬುದು ಮೌಢ್ಯತನದ ಪರಮಾವಧಿ. ಅದನ್ನು ಬಯಲು ಮಾಡುವ ಉದ್ದೇಶದಿಂದ ಈ ಉಪಾಹಾ ಸೇವನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಪ್ರಗತಿಪರರು ಹೇಳಿದ್ದಾರೆ.
ನಗರಪಾಲಿಕೆ ಸದಸ್ಯರಾದ ಪಲ್ಲವಿ ಬೇಗಂ, ಕವಿ ಹೊರಳವಾಡಿ ನಂಜುಂಡಸ್ವಾಮಿ, ಪಿ.ರಾಜು ಸೇರಿದಂತೆ ೨೦ಕ್ಕೂ ಹೆಚ್ಚು ಮಂದಿ ಈ ಸಂದರ್ಭದಲ್ಲಿ ಹಾಜರಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…