ಮಂಡ್ಯ: ಹಣ ದುರುಪಯೋಗ ಹಾಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂಡುವಾಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎಸ್.ಸಿದ್ದರಾಜು ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
೧೫ನೇ ಹಣಕಾಸು ಯೋಜನೆಯ ಅನುಷ್ಠಾನದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಿಯಮಬಾಹಿರವಾಗಿ ವೆಚ್ಚ ಭರಿಸಿರುವುದು ಹಾಗೂ ಗ್ರಾಮ ಪಂಚಾಯಿತಿ ಅನುದಾನಗಳನ್ನು ಕೆಟಿಪಿಪಿ ನಿಯಮಗಳನ್ನು ಉಲ್ಲಂಘಿಸಿ ನಿಯಮಬಾಹಿರವಾಗಿ ವೆಚ್ಚ ಭರಿಸಿರುವ ಬಗ್ಗೆ ಆರೋಪ ಸಾಬೀತಾಗಿದೆ. ಪಂಚಾಯಿತಿಯಲ್ಲಿ ಸುಮಾರು ೩೯ ಲಕ್ಷದಷ್ಟು ಅವ್ಯವಹಾರ ನಡೆಸಿದ್ದಾರೆ ಎಂದು ಸದಸ್ಯರು ಆರೋಪಿಸಿ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ದೂರು ಸಲ್ಲಿಸಿದ್ದರು.
ಕರ್ತವ್ಯಲೋಪವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ೧೯೫೭ರ ನಿಯಮ ೧೦(೧) ರಡಿ ಪ್ರÀದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಪಿಡಿಒ ಸಿದ್ದರಾಜು ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಈ ಹಿಂದೆ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎ.ಎಸ್.ಸಿದ್ದರಾಜು ಅವರು ಲಂಚ ಸ್ವೀಕರಿಸುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹದಳದ ಬಲೆಗೆ ಸಿಕ್ಕಿ ಬಿದ್ದಿದ್ದು, ಕರ್ತವ್ಯದಿಂದ ಅಮಾನತುಗೊಂಡಿದ್ದರು.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…