ಜಿಲ್ಲೆಗಳು

ಕರ್ತವ್ಯಲೋಪ: ಇಂಡುವಾಳು PDO ಅಮಾನತು

ಮಂಡ್ಯ: ಹಣ ದುರುಪಯೋಗ ಹಾಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂಡುವಾಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎಸ್.ಸಿದ್ದರಾಜು ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಕಟ್ಟಡದ ಒತ್ತುವರಿಯಿಂದ ಗ್ರಾಮ ಪಂಚಾಯಿತಿಗೆ ಸ್ವೀಕೃತವಾಗಿರುವ ಮೊತ್ತವನ್ನು ಪ್ರಾಧಿಕಾರದ ಅನುಮತಿ ಪಡೆಯದೆ ನಿಯಮಬಾಹಿರವಾಗಿ ವೆಚ್ಚ ಮಾಡಿದ್ದರು. ಗ್ರಾಮ ಪಂಚಾಯಿತಿ ನಿಧಿ-೨ರ ಖಾತೆಯಿಂದ ವೆಚ್ಚ ಭರಿಸಿರುವುದಕ್ಕೆ ಅಗತ್ಯ ದಾಖಲಾತಿ ಸಲ್ಲಿಸದಿರುವುದು ಹಾಗೂ ಬಿಡುಗಡೆಗೊಂಡ ಸದಸ್ಯರ ಗೌರವಧನ ಅನುದಾನ ಮೊತ್ತವನ್ನು ಇತರೆ ಉದ್ದೇಶಗಳಿಗೆ ಬಳಸಿಕೊಂಡಿದ್ದಾರೆ.
೧೫ನೇ ಹಣಕಾಸು ಯೋಜನೆಯ ಅನುಷ್ಠಾನದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಿಯಮಬಾಹಿರವಾಗಿ ವೆಚ್ಚ ಭರಿಸಿರುವುದು ಹಾಗೂ ಗ್ರಾಮ ಪಂಚಾಯಿತಿ ಅನುದಾನಗಳನ್ನು ಕೆಟಿಪಿಪಿ ನಿಯಮಗಳನ್ನು ಉಲ್ಲಂಘಿಸಿ ನಿಯಮಬಾಹಿರವಾಗಿ ವೆಚ್ಚ ಭರಿಸಿರುವ ಬಗ್ಗೆ ಆರೋಪ ಸಾಬೀತಾಗಿದೆ. ಪಂಚಾಯಿತಿಯಲ್ಲಿ ಸುಮಾರು ೩೯ ಲಕ್ಷದಷ್ಟು ಅವ್ಯವಹಾರ ನಡೆಸಿದ್ದಾರೆ ಎಂದು ಸದಸ್ಯರು ಆರೋಪಿಸಿ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ದೂರು ಸಲ್ಲಿಸಿದ್ದರು.
ಕರ್ತವ್ಯಲೋಪವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ೧೯೫೭ರ ನಿಯಮ ೧೦(೧) ರಡಿ ಪ್ರÀದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಪಿಡಿಒ ಸಿದ್ದರಾಜು ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಈ ಹಿಂದೆ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎ.ಎಸ್.ಸಿದ್ದರಾಜು ಅವರು ಲಂಚ ಸ್ವೀಕರಿಸುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹದಳದ ಬಲೆಗೆ ಸಿಕ್ಕಿ ಬಿದ್ದಿದ್ದು, ಕರ್ತವ್ಯದಿಂದ ಅಮಾನತುಗೊಂಡಿದ್ದರು.

andolanait

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

42 mins ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

1 hour ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

1 hour ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

2 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

3 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

5 hours ago