ಜಿಲ್ಲೆಗಳು

ಕರ್ತವ್ಯಲೋಪ: ಇಂಡುವಾಳು PDO ಅಮಾನತು

ಮಂಡ್ಯ: ಹಣ ದುರುಪಯೋಗ ಹಾಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂಡುವಾಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎಸ್.ಸಿದ್ದರಾಜು ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಕಟ್ಟಡದ ಒತ್ತುವರಿಯಿಂದ ಗ್ರಾಮ ಪಂಚಾಯಿತಿಗೆ ಸ್ವೀಕೃತವಾಗಿರುವ ಮೊತ್ತವನ್ನು ಪ್ರಾಧಿಕಾರದ ಅನುಮತಿ ಪಡೆಯದೆ ನಿಯಮಬಾಹಿರವಾಗಿ ವೆಚ್ಚ ಮಾಡಿದ್ದರು. ಗ್ರಾಮ ಪಂಚಾಯಿತಿ ನಿಧಿ-೨ರ ಖಾತೆಯಿಂದ ವೆಚ್ಚ ಭರಿಸಿರುವುದಕ್ಕೆ ಅಗತ್ಯ ದಾಖಲಾತಿ ಸಲ್ಲಿಸದಿರುವುದು ಹಾಗೂ ಬಿಡುಗಡೆಗೊಂಡ ಸದಸ್ಯರ ಗೌರವಧನ ಅನುದಾನ ಮೊತ್ತವನ್ನು ಇತರೆ ಉದ್ದೇಶಗಳಿಗೆ ಬಳಸಿಕೊಂಡಿದ್ದಾರೆ.
೧೫ನೇ ಹಣಕಾಸು ಯೋಜನೆಯ ಅನುಷ್ಠಾನದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಿಯಮಬಾಹಿರವಾಗಿ ವೆಚ್ಚ ಭರಿಸಿರುವುದು ಹಾಗೂ ಗ್ರಾಮ ಪಂಚಾಯಿತಿ ಅನುದಾನಗಳನ್ನು ಕೆಟಿಪಿಪಿ ನಿಯಮಗಳನ್ನು ಉಲ್ಲಂಘಿಸಿ ನಿಯಮಬಾಹಿರವಾಗಿ ವೆಚ್ಚ ಭರಿಸಿರುವ ಬಗ್ಗೆ ಆರೋಪ ಸಾಬೀತಾಗಿದೆ. ಪಂಚಾಯಿತಿಯಲ್ಲಿ ಸುಮಾರು ೩೯ ಲಕ್ಷದಷ್ಟು ಅವ್ಯವಹಾರ ನಡೆಸಿದ್ದಾರೆ ಎಂದು ಸದಸ್ಯರು ಆರೋಪಿಸಿ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ದೂರು ಸಲ್ಲಿಸಿದ್ದರು.
ಕರ್ತವ್ಯಲೋಪವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ೧೯೫೭ರ ನಿಯಮ ೧೦(೧) ರಡಿ ಪ್ರÀದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಪಿಡಿಒ ಸಿದ್ದರಾಜು ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಈ ಹಿಂದೆ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎ.ಎಸ್.ಸಿದ್ದರಾಜು ಅವರು ಲಂಚ ಸ್ವೀಕರಿಸುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹದಳದ ಬಲೆಗೆ ಸಿಕ್ಕಿ ಬಿದ್ದಿದ್ದು, ಕರ್ತವ್ಯದಿಂದ ಅಮಾನತುಗೊಂಡಿದ್ದರು.

andolanait

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

6 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

6 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

9 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

10 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

11 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

11 hours ago