ಜಿಲ್ಲೆಗಳು

ಅಮಾನತಾಗಿರುವ ಪ್ರೊ.ನಾಗರಾಜು ಮರು ನೇಮಕ ಸದ್ಯಕಿಲ್ಲ : ಕುಲಪತಿ

ಮೈಸೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಾನತುಗೊಂಡಿದ್ದ ಮೈಸೂರು ವಿವಿ ಭೂಗೋಳ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎಚ್.ನಾಗರಾಜ್ ಮರು ನೇಮಕ ಕುರಿತಂತೆ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲು ಮೈಸೂರು ವಿವಿ ಸಿಂಡಿಕೇಟ್ ನಿರ್ಧರಿಸಿದೆ.

ಶುಕ್ರವಾರ ಮೈಸೂರು ವಿವಿ ಸಿಂಡಿಕೇಟ್ ಸಭಾಂಗಣದಲ್ಲಿ ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಪ್ರೊ.ನಾಗರಾಜು ಅವರು ಬರೆದಿದ್ದ ಪತ್ರ ಸುದೀರ್ಘ ಚರ್ಚೆಗೆ ದಾರಿಮಾಡಿತಲ್ಲದೆ, ಸದಸ್ಯರು ಪರ-ವಿರೋಧ ಅಭಿಪ್ರಾಯಗಳನ್ನು ದಾಖಲಿಸಿದರು ಎಂದು ಗೊತ್ತಾಗಿದೆ.

ಪ್ರಭಾರ ಕುಲಪತಿ ಮಾತನಾಡಿ, ಅಮಾನತು ಅವಧಿ ೬ ತಿಂಗಳು ಮುಗಿದಿರುವುದರಿಂದ ಆದೇಶ ರದ್ದುಗೊಳಿಸಿ ಮತ್ತೆ ತಮ್ಮನ್ನು ವಿವಿಗೆ ಸೇರಿಸಿಕೊಳ್ಳಬೇಕೆಂದು ನಾಗರಾಜ್ ಅವರು ಮೈಸೂರು ವಿವಿಗೆ ಪತ್ರ ಬರೆದು ಮನವಿ ವಾಡಿದ್ದಾರೆ. ಈ ಸಂಬಂಧ ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆದಿತ್ತು. ಕೆಲವರು ನಾಗರಾಜ್ ಅವರಿಗೆ ಅವಕಾಶ ನೀಡುವಂತೆ ಹಾಗೂ ಮತ್ತೆ ಕೆಲವರು ಬೇಡವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಇದು ನ್ಯಾಯಲಯದಲ್ಲಿ ಇರುವುದರಿಂದ ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯುವ ನಿರ್ಧಾರಕ್ಕೆ ಸಿಂಡಿಕೇಟ್ ಸಭೆಯಲ್ಲಿ ಸಮ್ಮತಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರೊ. ನಾಗರಾಜ್ ಅವರು ಧಾರವಾಡ ವಿವಿ ಕುಲಸಚಿವರೂ ಆಗಿದ್ದರು. ಆದರೆ, ಇವರು ಮಾರ್ಗದರ್ಶನ ಮಾಡಿದ್ದ ಸೌಮ್ಯ ಎಂಬ ಯುವತಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದಲ್ಲಿ ಸಿಕ್ಕಿ ಬಿದ್ದಳು. ಅಲ್ಲದೆ, ಆಕೆಯು ವಿಚಾರಣೆಯ ಸಂದರ್ಭದಲ್ಲಿ ಪ್ರೊ.ನಾಗರಾಜ್ ಅವರ ಹೆಸರನ್ನು ಬಹಿರಂಗಪಡಿಸಿದ್ದರು. ಇದರಿಂದ ಪ್ರೊ. ನಾಗರಾಜ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿ ಬಿಡುಗಡೆಗೊಳಿಸಿದ್ದರು. ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

andolanait

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

4 mins ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

13 mins ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

21 mins ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

25 mins ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

2 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

3 hours ago