ಮೈಸೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಾನತುಗೊಂಡಿದ್ದ ಮೈಸೂರು ವಿವಿ ಭೂಗೋಳ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎಚ್.ನಾಗರಾಜ್ ಮರು ನೇಮಕ ಕುರಿತಂತೆ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲು ಮೈಸೂರು ವಿವಿ ಸಿಂಡಿಕೇಟ್ ನಿರ್ಧರಿಸಿದೆ.
ಶುಕ್ರವಾರ ಮೈಸೂರು ವಿವಿ ಸಿಂಡಿಕೇಟ್ ಸಭಾಂಗಣದಲ್ಲಿ ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಪ್ರೊ.ನಾಗರಾಜು ಅವರು ಬರೆದಿದ್ದ ಪತ್ರ ಸುದೀರ್ಘ ಚರ್ಚೆಗೆ ದಾರಿಮಾಡಿತಲ್ಲದೆ, ಸದಸ್ಯರು ಪರ-ವಿರೋಧ ಅಭಿಪ್ರಾಯಗಳನ್ನು ದಾಖಲಿಸಿದರು ಎಂದು ಗೊತ್ತಾಗಿದೆ.
ಪ್ರಭಾರ ಕುಲಪತಿ ಮಾತನಾಡಿ, ಅಮಾನತು ಅವಧಿ ೬ ತಿಂಗಳು ಮುಗಿದಿರುವುದರಿಂದ ಆದೇಶ ರದ್ದುಗೊಳಿಸಿ ಮತ್ತೆ ತಮ್ಮನ್ನು ವಿವಿಗೆ ಸೇರಿಸಿಕೊಳ್ಳಬೇಕೆಂದು ನಾಗರಾಜ್ ಅವರು ಮೈಸೂರು ವಿವಿಗೆ ಪತ್ರ ಬರೆದು ಮನವಿ ವಾಡಿದ್ದಾರೆ. ಈ ಸಂಬಂಧ ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆದಿತ್ತು. ಕೆಲವರು ನಾಗರಾಜ್ ಅವರಿಗೆ ಅವಕಾಶ ನೀಡುವಂತೆ ಹಾಗೂ ಮತ್ತೆ ಕೆಲವರು ಬೇಡವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಇದು ನ್ಯಾಯಲಯದಲ್ಲಿ ಇರುವುದರಿಂದ ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯುವ ನಿರ್ಧಾರಕ್ಕೆ ಸಿಂಡಿಕೇಟ್ ಸಭೆಯಲ್ಲಿ ಸಮ್ಮತಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರೊ. ನಾಗರಾಜ್ ಅವರು ಧಾರವಾಡ ವಿವಿ ಕುಲಸಚಿವರೂ ಆಗಿದ್ದರು. ಆದರೆ, ಇವರು ಮಾರ್ಗದರ್ಶನ ಮಾಡಿದ್ದ ಸೌಮ್ಯ ಎಂಬ ಯುವತಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದಲ್ಲಿ ಸಿಕ್ಕಿ ಬಿದ್ದಳು. ಅಲ್ಲದೆ, ಆಕೆಯು ವಿಚಾರಣೆಯ ಸಂದರ್ಭದಲ್ಲಿ ಪ್ರೊ.ನಾಗರಾಜ್ ಅವರ ಹೆಸರನ್ನು ಬಹಿರಂಗಪಡಿಸಿದ್ದರು. ಇದರಿಂದ ಪ್ರೊ. ನಾಗರಾಜ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿ ಬಿಡುಗಡೆಗೊಳಿಸಿದ್ದರು. ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…