ಜಿಲ್ಲೆಗಳು

ಅಮಾನತಾಗಿರುವ ಪ್ರೊ.ನಾಗರಾಜು ಮರು ನೇಮಕ ಸದ್ಯಕಿಲ್ಲ : ಕುಲಪತಿ

ಮೈಸೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಾನತುಗೊಂಡಿದ್ದ ಮೈಸೂರು ವಿವಿ ಭೂಗೋಳ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎಚ್.ನಾಗರಾಜ್ ಮರು ನೇಮಕ ಕುರಿತಂತೆ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲು ಮೈಸೂರು ವಿವಿ ಸಿಂಡಿಕೇಟ್ ನಿರ್ಧರಿಸಿದೆ.

ಶುಕ್ರವಾರ ಮೈಸೂರು ವಿವಿ ಸಿಂಡಿಕೇಟ್ ಸಭಾಂಗಣದಲ್ಲಿ ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಪ್ರೊ.ನಾಗರಾಜು ಅವರು ಬರೆದಿದ್ದ ಪತ್ರ ಸುದೀರ್ಘ ಚರ್ಚೆಗೆ ದಾರಿಮಾಡಿತಲ್ಲದೆ, ಸದಸ್ಯರು ಪರ-ವಿರೋಧ ಅಭಿಪ್ರಾಯಗಳನ್ನು ದಾಖಲಿಸಿದರು ಎಂದು ಗೊತ್ತಾಗಿದೆ.

ಪ್ರಭಾರ ಕುಲಪತಿ ಮಾತನಾಡಿ, ಅಮಾನತು ಅವಧಿ ೬ ತಿಂಗಳು ಮುಗಿದಿರುವುದರಿಂದ ಆದೇಶ ರದ್ದುಗೊಳಿಸಿ ಮತ್ತೆ ತಮ್ಮನ್ನು ವಿವಿಗೆ ಸೇರಿಸಿಕೊಳ್ಳಬೇಕೆಂದು ನಾಗರಾಜ್ ಅವರು ಮೈಸೂರು ವಿವಿಗೆ ಪತ್ರ ಬರೆದು ಮನವಿ ವಾಡಿದ್ದಾರೆ. ಈ ಸಂಬಂಧ ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆದಿತ್ತು. ಕೆಲವರು ನಾಗರಾಜ್ ಅವರಿಗೆ ಅವಕಾಶ ನೀಡುವಂತೆ ಹಾಗೂ ಮತ್ತೆ ಕೆಲವರು ಬೇಡವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಇದು ನ್ಯಾಯಲಯದಲ್ಲಿ ಇರುವುದರಿಂದ ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯುವ ನಿರ್ಧಾರಕ್ಕೆ ಸಿಂಡಿಕೇಟ್ ಸಭೆಯಲ್ಲಿ ಸಮ್ಮತಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರೊ. ನಾಗರಾಜ್ ಅವರು ಧಾರವಾಡ ವಿವಿ ಕುಲಸಚಿವರೂ ಆಗಿದ್ದರು. ಆದರೆ, ಇವರು ಮಾರ್ಗದರ್ಶನ ಮಾಡಿದ್ದ ಸೌಮ್ಯ ಎಂಬ ಯುವತಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದಲ್ಲಿ ಸಿಕ್ಕಿ ಬಿದ್ದಳು. ಅಲ್ಲದೆ, ಆಕೆಯು ವಿಚಾರಣೆಯ ಸಂದರ್ಭದಲ್ಲಿ ಪ್ರೊ.ನಾಗರಾಜ್ ಅವರ ಹೆಸರನ್ನು ಬಹಿರಂಗಪಡಿಸಿದ್ದರು. ಇದರಿಂದ ಪ್ರೊ. ನಾಗರಾಜ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿ ಬಿಡುಗಡೆಗೊಳಿಸಿದ್ದರು. ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago