ಮೈಸೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಾನತುಗೊಂಡಿದ್ದ ಮೈಸೂರು ವಿವಿ ಭೂಗೋಳ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎಚ್.ನಾಗರಾಜ್ ಮರು ನೇಮಕ ಕುರಿತಂತೆ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲು ಮೈಸೂರು ವಿವಿ ಸಿಂಡಿಕೇಟ್ ನಿರ್ಧರಿಸಿದೆ.
ಶುಕ್ರವಾರ ಮೈಸೂರು ವಿವಿ ಸಿಂಡಿಕೇಟ್ ಸಭಾಂಗಣದಲ್ಲಿ ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಪ್ರೊ.ನಾಗರಾಜು ಅವರು ಬರೆದಿದ್ದ ಪತ್ರ ಸುದೀರ್ಘ ಚರ್ಚೆಗೆ ದಾರಿಮಾಡಿತಲ್ಲದೆ, ಸದಸ್ಯರು ಪರ-ವಿರೋಧ ಅಭಿಪ್ರಾಯಗಳನ್ನು ದಾಖಲಿಸಿದರು ಎಂದು ಗೊತ್ತಾಗಿದೆ.
ಪ್ರಭಾರ ಕುಲಪತಿ ಮಾತನಾಡಿ, ಅಮಾನತು ಅವಧಿ ೬ ತಿಂಗಳು ಮುಗಿದಿರುವುದರಿಂದ ಆದೇಶ ರದ್ದುಗೊಳಿಸಿ ಮತ್ತೆ ತಮ್ಮನ್ನು ವಿವಿಗೆ ಸೇರಿಸಿಕೊಳ್ಳಬೇಕೆಂದು ನಾಗರಾಜ್ ಅವರು ಮೈಸೂರು ವಿವಿಗೆ ಪತ್ರ ಬರೆದು ಮನವಿ ವಾಡಿದ್ದಾರೆ. ಈ ಸಂಬಂಧ ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆದಿತ್ತು. ಕೆಲವರು ನಾಗರಾಜ್ ಅವರಿಗೆ ಅವಕಾಶ ನೀಡುವಂತೆ ಹಾಗೂ ಮತ್ತೆ ಕೆಲವರು ಬೇಡವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಇದು ನ್ಯಾಯಲಯದಲ್ಲಿ ಇರುವುದರಿಂದ ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯುವ ನಿರ್ಧಾರಕ್ಕೆ ಸಿಂಡಿಕೇಟ್ ಸಭೆಯಲ್ಲಿ ಸಮ್ಮತಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರೊ. ನಾಗರಾಜ್ ಅವರು ಧಾರವಾಡ ವಿವಿ ಕುಲಸಚಿವರೂ ಆಗಿದ್ದರು. ಆದರೆ, ಇವರು ಮಾರ್ಗದರ್ಶನ ಮಾಡಿದ್ದ ಸೌಮ್ಯ ಎಂಬ ಯುವತಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದಲ್ಲಿ ಸಿಕ್ಕಿ ಬಿದ್ದಳು. ಅಲ್ಲದೆ, ಆಕೆಯು ವಿಚಾರಣೆಯ ಸಂದರ್ಭದಲ್ಲಿ ಪ್ರೊ.ನಾಗರಾಜ್ ಅವರ ಹೆಸರನ್ನು ಬಹಿರಂಗಪಡಿಸಿದ್ದರು. ಇದರಿಂದ ಪ್ರೊ. ನಾಗರಾಜ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿ ಬಿಡುಗಡೆಗೊಳಿಸಿದ್ದರು. ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…
ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…