ಸುತ್ತೂರು: ಕಳೆದ ಆರು ದಿನಗಳಿಂದ ನಡೆಯುತ್ತಿರು ಸುತ್ತೂರು ಜಾತ್ರೆಗೆ ಇಂದು ( ಫೆಬ್ರವರಿ 11 ) ತೆರೆ ಬೀಳಲಿದ್ದು, ಇಂದು ಅಮಿತ್ ಶಾ ಕ್ಷೇತ್ರಕ್ಕೆ ಆಗಮಿಸಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುತ್ತೂರು ಮಠದ ಕೊಡುಗೆಯನ್ನು ಶ್ಲಾಘಿಸಿ ಅದನ್ನು ತಮ್ಮ ಬಿಜೆಪಿ ಪಕ್ಷ ಸದಾ ಸ್ಮರಿಸಿಕೊಳ್ಳುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಅಯೋಧ್ಯೆಯ ರಾಮಮಂದಿರದ ಬಾಲರಾಮ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಅಮಿತ್ ಶಾ ಸನ್ಮಾನಿಸಿದರು. ಅಯೋಧ್ಯೆಯಲ್ಲಿ ಸುತ್ತೂರು ಮಠದ ಶಾಖಾ ಮಠ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂಬ ಮಾಹಿತಿ ಹಂಚಿಕೊಂಡ ಅವರು ಸುತ್ತೂರು ಮಠದ ಹಿಂದಿನ 24 ಮಠಾಧೀಶರನ್ನು ನೆನಪಿಸಿಕೊಳ್ಳುತ್ತೇನೆ, ಸುತ್ತೂರು ಮಠ ನಿಸ್ವಾರ್ಥ ಸೇವೆಯನ್ನು ಮಾಡಿಕೊಂಡು ಬಂದಿದೆ. ಅಹ್ಮದಾಬಾದ್ ಕಾರ್ಯಕ್ರಮವನ್ನು ರದ್ದು ಮಾಡಿ ಇಲ್ಲಿಗೆ ಬಂದಿದ್ದೇನೆ, ಸುತ್ತೂರು ಮಠದ ಕೊಡುಗೆಯನ್ನು ಬಿಜೆಪಿ ಸದಾ ಸ್ಮರಿಸಿಕೊಳ್ಳುತ್ತದೆ ಎಂದು ತಿಳಿಸಿದರು.
ಜೆಎಸ್ಎಸ್ ಸಂಸ್ಥೆ ಮೂಲಕ ಶಿಕ್ಷಣ ಸೌಲಭ್ಯ ಒದಗಿಸಿರುವುದನ್ನು ಶ್ಲಾಘಿಸಿದ ಅಮಿತ್ ಶಾ 350ಕ್ಕೂ ಹೆಚ್ಚು ಜೆಎಸ್ಎಸ್ ಸಂಸ್ಥೆಗಳಿವೆ, ಒಂದು ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದರೆ. ಅಂಗವಿಕಲರಿಗೂ ಪಾಲಿಟೆಕ್ನಿಕ್ ತೆರೆದಿರುವುದು ಪುಣ್ಯದ ಕೆಲಸ ಎಂದರು.
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…