ಸುತ್ತೂರು: ಕಳೆದ ಆರು ದಿನಗಳಿಂದ ನಡೆಯುತ್ತಿರು ಸುತ್ತೂರು ಜಾತ್ರೆಗೆ ಇಂದು ( ಫೆಬ್ರವರಿ 11 ) ತೆರೆ ಬೀಳಲಿದ್ದು, ಇಂದು ಅಮಿತ್ ಶಾ ಕ್ಷೇತ್ರಕ್ಕೆ ಆಗಮಿಸಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುತ್ತೂರು ಮಠದ ಕೊಡುಗೆಯನ್ನು ಶ್ಲಾಘಿಸಿ ಅದನ್ನು ತಮ್ಮ ಬಿಜೆಪಿ ಪಕ್ಷ ಸದಾ ಸ್ಮರಿಸಿಕೊಳ್ಳುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಅಯೋಧ್ಯೆಯ ರಾಮಮಂದಿರದ ಬಾಲರಾಮ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಅಮಿತ್ ಶಾ ಸನ್ಮಾನಿಸಿದರು. ಅಯೋಧ್ಯೆಯಲ್ಲಿ ಸುತ್ತೂರು ಮಠದ ಶಾಖಾ ಮಠ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂಬ ಮಾಹಿತಿ ಹಂಚಿಕೊಂಡ ಅವರು ಸುತ್ತೂರು ಮಠದ ಹಿಂದಿನ 24 ಮಠಾಧೀಶರನ್ನು ನೆನಪಿಸಿಕೊಳ್ಳುತ್ತೇನೆ, ಸುತ್ತೂರು ಮಠ ನಿಸ್ವಾರ್ಥ ಸೇವೆಯನ್ನು ಮಾಡಿಕೊಂಡು ಬಂದಿದೆ. ಅಹ್ಮದಾಬಾದ್ ಕಾರ್ಯಕ್ರಮವನ್ನು ರದ್ದು ಮಾಡಿ ಇಲ್ಲಿಗೆ ಬಂದಿದ್ದೇನೆ, ಸುತ್ತೂರು ಮಠದ ಕೊಡುಗೆಯನ್ನು ಬಿಜೆಪಿ ಸದಾ ಸ್ಮರಿಸಿಕೊಳ್ಳುತ್ತದೆ ಎಂದು ತಿಳಿಸಿದರು.
ಜೆಎಸ್ಎಸ್ ಸಂಸ್ಥೆ ಮೂಲಕ ಶಿಕ್ಷಣ ಸೌಲಭ್ಯ ಒದಗಿಸಿರುವುದನ್ನು ಶ್ಲಾಘಿಸಿದ ಅಮಿತ್ ಶಾ 350ಕ್ಕೂ ಹೆಚ್ಚು ಜೆಎಸ್ಎಸ್ ಸಂಸ್ಥೆಗಳಿವೆ, ಒಂದು ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದರೆ. ಅಂಗವಿಕಲರಿಗೂ ಪಾಲಿಟೆಕ್ನಿಕ್ ತೆರೆದಿರುವುದು ಪುಣ್ಯದ ಕೆಲಸ ಎಂದರು.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…