ಜಿಲ್ಲೆಗಳು

Suttur Jatre 2024: ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದರು. ಸುತ್ತೂರು ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್, ಕೆ.ಜಿ.ಜಾರ್ಜ್, ಕೆ.ವೆಂಕಟೇಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ದೇಸಿ ಕ್ರೀಡೆಗಳಿಗೆ ಚಾಲನೆ ನೀಡಿದರು.

ನಿನ್ನೆ ( ಫೆಬ್ರವರಿ 6 ) ಆರಂಭವಾಗಿರುವ ಸುತ್ತೂರು ಜಾತ್ರೆ ಆರು ದಿನಗಳ ಕಾಲ ನಡೆಯಲಿದ್ದು, ಫೆಬ್ರವರಿ 11ರಂದು ಈ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಆಚರಣೆ ಜತೆಗೆ ವಿವಿಧ ಕಲೆ, ಸಂಸ್ಕೃತಿ ಹಾಗೂ ಕ್ರೀಡೆಗಳ ಚಟುವಟಿಕೆಗಳನ್ನೂ ಸಹ ಆಯೋಜಿಸಲಾಗಿದ್ದು ಭಕ್ತರಿಗೆ ಮನರಂಜನೆ ಸಹ ಸಿಗಲಿದೆ.

ಇನ್ನು ಇಂದು ಬೆಳಗ್ಗೆ ನವದೆಹಲಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ತಮ್ಮದೇ ನೇತೃತ್ವದಲ್ಲಿ ನಡೆದ ದೆಹಲಿ ಚಲೋನಲ್ಲಿ ಭಾಗವಹಿಸಿದರು. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ವಿಚಾರದಲ್ಲಿ ತಾರತಮ್ಯ ತೋರುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌ ಕೇಂದ್ರದ ವಿರುದ್ಧ ಸಮರ ಸಾರಿದ್ದರು.

andolana

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

4 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

4 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

4 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

4 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

16 hours ago