ಮೈಸೂರು: ಶ್ರೀ ಕ್ಷೇತ್ರ ಸುತ್ತೂರು ಜಾತ್ರೆ ಮಹೋತ್ಸವದಲ್ಲಿ ಕೃಷಿ, ಆರೋಗ್ಯ, ಶೈಕ್ಷಣಿಕ, ಸಾಮಾಜಿಕವಾದಂತಹ ಹಲವು ಕ್ಷೇತ್ರಗಳಲ್ಲಿ ಹೊಸ ಹೊಸ ಅವಿಷ್ಕಾರ ಹಾಗೂ ವಿಷಯಗಳನ್ನು ಜನರಿಗೆ ಅರಿವು ಮೂಡಿಸುತ್ತಿರುವ ಕಾರಣ ಈ ಜಾತ್ರೆಯು ರಾಜ್ಯದಲ್ಲಿ ಮಹತ್ವ ಪಡೆದುಕೊಂಡಿದೆ ಎಂದು ಆಹಾರ ಮತ್ತು ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡುರಾವ್ ಅವರು ಹೇಳಿದ್ದಾರೆ.
ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಕೃಷಿಮೇಳ , ಆರೋಗ್ಯ, ತಪಾಸಣಾ ಶಿಬಿರ ಹಾಗೂ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು ಆರೋಗ್ಯ ಮತ್ತು ಆಹಾರಕ್ಕೆ ನೇರ ಸಂಪರ್ಕವಿದ್ದು, ಮನುಷ್ಯನಿಗೆ ರೋಗ-ರುಜಿನಗಳು ಬರುತ್ತಿರುವುದು ನಮ್ಮ ಜೀವನ ಶೈಲಿಯಿಂದ ಅದನ್ನು ನಿಯಂತ್ರಿಸಲು ಕೇವಲ ಆಹಾರ ಕ್ರಮದಿಂದ ಮಾತ್ರ ಸಾಧ್ಯ, ಆಹಾರದ ಪದ್ಧತಿಗಳು ಉತ್ತಮವಾಗಿದ್ದರೆ ಆರೋಗ್ಯವು ಕ್ಷೇಮವಾಗಿರುತ್ತದೆ. ಇಂದಿನ ಯುವ ಜನಾಂಗಕ್ಕೆ ಈ ಬಗ್ಗೆ ಹೆಚ್ಚಿನ ಜಾಗೃತಿ ಅರಿವು ಮೂಡಿಸುವ ಉದ್ದೇಶದಿಂದ ಈ ಜಾತ್ರೆಯಲ್ಲಿ ಆರೋಗ್ಯ ತಪಾಸಣೆ, ಕೃಷಿಮೇಳ, ಆಹಾರ ಮೇಳ ಹಾಗೂ ಆಧ್ಯಾತ್ಮಿಕ ಸಂದೇಶಗಳನ್ನು ತಿಳಿಸುತ್ತಿವೆ ಎಂದಿದ್ದಾರೆ.
ಇನ್ನು ನಿನ್ನೆ ( ಫೆಬ್ರವರಿ 6 ) ಆರಂಭಗೊಂಡಿರುವ ಸುತ್ತೂರು ಜಾತ್ರಾ ಮಹೋತ್ಸವ ಆರು ದಿನಗಳ ಕಾಲ ನಡೆಯಲಿದ್ದು, ಧಾರ್ಮಿಕ ಆಚರಣೆ ಜತೆಗೆ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು ನಡೆಯಲಿದ್ದು, ಫೆಬ್ರವರಿ 11ರಂದು ಮುಕ್ತಾಯಗೊಳ್ಳಲಿದೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…