ಜಿಲ್ಲೆಗಳು

Suttur Jatre 2024: ಸುತ್ತೂರು ಜಾತ್ರೆ ಅರಿವಿನ ಜಾತ್ರೆಯಾಗಿದೆ: ದಿನೇಶ್ ಗುಂಡೂರಾವ್

ಮೈಸೂರು: ಶ್ರೀ ಕ್ಷೇತ್ರ ಸುತ್ತೂರು ಜಾತ್ರೆ ಮಹೋತ್ಸವದಲ್ಲಿ ಕೃಷಿ, ಆರೋಗ್ಯ, ಶೈಕ್ಷಣಿಕ, ಸಾಮಾಜಿಕವಾದಂತಹ ಹಲವು ಕ್ಷೇತ್ರಗಳಲ್ಲಿ ಹೊಸ ಹೊಸ ಅವಿಷ್ಕಾರ ಹಾಗೂ ವಿಷಯಗಳನ್ನು ಜನರಿಗೆ ಅರಿವು ಮೂಡಿಸುತ್ತಿರುವ ಕಾರಣ ಈ ಜಾತ್ರೆಯು ರಾಜ್ಯದಲ್ಲಿ ಮಹತ್ವ ಪಡೆದುಕೊಂಡಿದೆ ಎಂದು ಆಹಾರ ಮತ್ತು ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡುರಾವ್ ಅವರು ಹೇಳಿದ್ದಾರೆ.

ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಕೃಷಿಮೇಳ , ಆರೋಗ್ಯ, ತಪಾಸಣಾ ಶಿಬಿರ ಹಾಗೂ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು ಆರೋಗ್ಯ ಮತ್ತು ಆಹಾರಕ್ಕೆ ನೇರ ಸಂಪರ್ಕವಿದ್ದು, ಮನುಷ್ಯನಿಗೆ ರೋಗ-ರುಜಿನಗಳು ಬರುತ್ತಿರುವುದು ನಮ್ಮ ಜೀವನ ಶೈಲಿಯಿಂದ ಅದನ್ನು ನಿಯಂತ್ರಿಸಲು ಕೇವಲ ಆಹಾರ ಕ್ರಮದಿಂದ ಮಾತ್ರ ಸಾಧ್ಯ, ಆಹಾರದ ಪದ್ಧತಿಗಳು ಉತ್ತಮವಾಗಿದ್ದರೆ ಆರೋಗ್ಯವು ಕ್ಷೇಮವಾಗಿರುತ್ತದೆ. ಇಂದಿನ ಯುವ ಜನಾಂಗಕ್ಕೆ ಈ ಬಗ್ಗೆ ಹೆಚ್ಚಿನ ಜಾಗೃತಿ ಅರಿವು ಮೂಡಿಸುವ ಉದ್ದೇಶದಿಂದ ಈ ಜಾತ್ರೆಯಲ್ಲಿ ಆರೋಗ್ಯ ತಪಾಸಣೆ, ಕೃಷಿಮೇಳ, ಆಹಾರ ಮೇಳ ಹಾಗೂ ಆಧ್ಯಾತ್ಮಿಕ ಸಂದೇಶಗಳನ್ನು ತಿಳಿಸುತ್ತಿವೆ ಎಂದಿದ್ದಾರೆ.

ಇನ್ನು ನಿನ್ನೆ ( ಫೆಬ್ರವರಿ 6 ) ಆರಂಭಗೊಂಡಿರುವ ಸುತ್ತೂರು ಜಾತ್ರಾ ಮಹೋತ್ಸವ ಆರು ದಿನಗಳ ಕಾಲ ನಡೆಯಲಿದ್ದು, ಧಾರ್ಮಿಕ ಆಚರಣೆ ಜತೆಗೆ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು ನಡೆಯಲಿದ್ದು, ಫೆಬ್ರವರಿ 11ರಂದು ಮುಕ್ತಾಯಗೊಳ್ಳಲಿದೆ.

andolana

Recent Posts

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಯತ್ನ: ವಿಜಯೇಂದ್ರ ವಾಗ್ದಾಳಿ

ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು…

3 mins ago

ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಕಡಿವಾಣ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…

51 mins ago

ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ಮುಗಿಲುಮುಟ್ಟಿದ ಗೋವಿಂದ ನಾಮಸ್ಮರಣೆ

ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.…

1 hour ago

ಓದುಗರ ಪತ್ರ: ಕುವೆಂಪು

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…

4 hours ago

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…

4 hours ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…

4 hours ago