ಮೈಸೂರು: ಶ್ರೀ ಕ್ಷೇತ್ರ ಸುತ್ತೂರು ಜಾತ್ರೆ ಮಹೋತ್ಸವದಲ್ಲಿ ಕೃಷಿ, ಆರೋಗ್ಯ, ಶೈಕ್ಷಣಿಕ, ಸಾಮಾಜಿಕವಾದಂತಹ ಹಲವು ಕ್ಷೇತ್ರಗಳಲ್ಲಿ ಹೊಸ ಹೊಸ ಅವಿಷ್ಕಾರ ಹಾಗೂ ವಿಷಯಗಳನ್ನು ಜನರಿಗೆ ಅರಿವು ಮೂಡಿಸುತ್ತಿರುವ ಕಾರಣ ಈ ಜಾತ್ರೆಯು ರಾಜ್ಯದಲ್ಲಿ ಮಹತ್ವ ಪಡೆದುಕೊಂಡಿದೆ ಎಂದು ಆಹಾರ ಮತ್ತು ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡುರಾವ್ ಅವರು ಹೇಳಿದ್ದಾರೆ.
ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಕೃಷಿಮೇಳ , ಆರೋಗ್ಯ, ತಪಾಸಣಾ ಶಿಬಿರ ಹಾಗೂ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು ಆರೋಗ್ಯ ಮತ್ತು ಆಹಾರಕ್ಕೆ ನೇರ ಸಂಪರ್ಕವಿದ್ದು, ಮನುಷ್ಯನಿಗೆ ರೋಗ-ರುಜಿನಗಳು ಬರುತ್ತಿರುವುದು ನಮ್ಮ ಜೀವನ ಶೈಲಿಯಿಂದ ಅದನ್ನು ನಿಯಂತ್ರಿಸಲು ಕೇವಲ ಆಹಾರ ಕ್ರಮದಿಂದ ಮಾತ್ರ ಸಾಧ್ಯ, ಆಹಾರದ ಪದ್ಧತಿಗಳು ಉತ್ತಮವಾಗಿದ್ದರೆ ಆರೋಗ್ಯವು ಕ್ಷೇಮವಾಗಿರುತ್ತದೆ. ಇಂದಿನ ಯುವ ಜನಾಂಗಕ್ಕೆ ಈ ಬಗ್ಗೆ ಹೆಚ್ಚಿನ ಜಾಗೃತಿ ಅರಿವು ಮೂಡಿಸುವ ಉದ್ದೇಶದಿಂದ ಈ ಜಾತ್ರೆಯಲ್ಲಿ ಆರೋಗ್ಯ ತಪಾಸಣೆ, ಕೃಷಿಮೇಳ, ಆಹಾರ ಮೇಳ ಹಾಗೂ ಆಧ್ಯಾತ್ಮಿಕ ಸಂದೇಶಗಳನ್ನು ತಿಳಿಸುತ್ತಿವೆ ಎಂದಿದ್ದಾರೆ.
ಇನ್ನು ನಿನ್ನೆ ( ಫೆಬ್ರವರಿ 6 ) ಆರಂಭಗೊಂಡಿರುವ ಸುತ್ತೂರು ಜಾತ್ರಾ ಮಹೋತ್ಸವ ಆರು ದಿನಗಳ ಕಾಲ ನಡೆಯಲಿದ್ದು, ಧಾರ್ಮಿಕ ಆಚರಣೆ ಜತೆಗೆ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು ನಡೆಯಲಿದ್ದು, ಫೆಬ್ರವರಿ 11ರಂದು ಮುಕ್ತಾಯಗೊಳ್ಳಲಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…