ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ
ಸುದ್ದಿಗೋಷ್ಠಿಯಲ್ಲಿ ಕೆ.ವೆಂಕಟರಾಜು ಮಾಹಿತಿ
ಚಾಮರಾಜನಗರ: ಶಾಂತಲಾ ಕಲಾವಿದರು ತಂಡವು ೫೦ ವರ್ಷ ಪೂರೈಸಿ ಸುವರ್ಣ ಸಂಭ್ರಮ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಶಾಂತಲಾ ಕಲಾವಿದರು ಟ್ರಸ್ಟ್ನ ಕೆ.ವೆಂಕಟರಾಜು ತಿಳಿಸಿದರು.
೧೯೭೩ರ ಡಿಸೆಂಬರ್ ೧೦ ರಂದು ಕಲಾವಿದರು ತಂಡವು ಪ್ರಾರಂಭವಾಯಿತು. ೨೦೨೩ರ ಅಕ್ಟೋಬರ್ ೧೦ಕ್ಕೆ ತಂಡವು ೫೦ ವರ್ಷ ಪೂರೈಸಿ ಸುವರ್ಣ ಸಂಭ್ರಮದ ಹೊಸ್ತಿಲಿನಲ್ಲಿದೆ. ಇದರ ಅಂಗವಾಗಿ ನಾಟಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ.೨೦ ರಂದು ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆಯುವ ಈ ಸುವರ್ಣ ಸಂಭ್ರಮ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ರಂಗ ನಿರ್ದೇಶಕ ಪ್ರಸನ್ನ ಅವರು ಚಾಲನೆ ನೀಡುವರು ಎಂದರು.
ವಿಜ್ಞಾನ ಲೇಖಕ ಕೊಳ್ಳೇಗಾಲ ಶರ್ಮ, ರಂಗಕರ್ಮಿ ಡಾ.ಶೀಲಾಕುಮಾರಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಎ.ಡಿ.ಸಿಲ್ವ ಅಧ್ಯಕ್ಷತೆ ವಹಿಸುತ್ತಾರೆ. ತದನಂತರ ಅರಿವು ಕಲಾ ಬಳಗದ ವತಿಯಿಂದ ಕ್ಯೂಇಡಿ ಎಂಬ ನಾಟಕ ಪ್ರದರ್ಶನ ಇರಲಿದೆ. ಯತೀಶ್ ಕೊಳ್ಳೇಗಾಲ ನಿರ್ದೇಶಿಸಿ ತಾವೇ ಅಭಿನಯಿಸಿದ್ದಾರೆ ಎಂದು ತಿಳಿಸಿದರು.
ಸುವರ್ಣ ಸಂಭ್ರಮದ ಪ್ರಯುಕ್ತ ಪ್ರತಿ ತಿಂಗಳು ಒಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುವುದು. ೨೦೨೩ರ ಅಕ್ಟೋಬರ್-ನವೆಂಬರ್ ತಿಂಗಳÀಲ್ಲಿ ೨ ಅಥವಾ ೩ ದಿನಗಳ ಕಾಲ ಉತ್ಸವ ನಡೆಸಲಾಗುತ್ತದೆ ಎಂದು ತಿಳಿಸಿದರು.
ನಾವು ಶಾಲೆ, ಕಾಲೇಜು ದಿವಸಗಳಲ್ಲಿ ನಾಟಕಗಳಲ್ಲಿ ಭಾಗವಹಿಸಿ ಆಸಕ್ತಿಯನ್ನು ತಳೆದವು. ಕಾಲೇಜು ವಿದ್ಯಾಭ್ಯಾಸ ಮುಗಿಸಿದ ನಂತರ ರಂಗ ಚಟುವಟಿಕೆಗೆ ಮೀಸಲಾದ ಹವ್ಯಾಸ ತಂಡ ಕಟ್ಟಬೇಕೆಂಬ ಉತ್ಕಟವಾದ ಬಯಕೆಯಿಂದ ಶಾಂತಲಾ ಕಲಾವಿದರ ತಂಡವನ್ನು ಕಟ್ಟಲಾಯಿತು ಎಂದರು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…