ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ
ಸುದ್ದಿಗೋಷ್ಠಿಯಲ್ಲಿ ಕೆ.ವೆಂಕಟರಾಜು ಮಾಹಿತಿ
ಚಾಮರಾಜನಗರ: ಶಾಂತಲಾ ಕಲಾವಿದರು ತಂಡವು ೫೦ ವರ್ಷ ಪೂರೈಸಿ ಸುವರ್ಣ ಸಂಭ್ರಮ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಶಾಂತಲಾ ಕಲಾವಿದರು ಟ್ರಸ್ಟ್ನ ಕೆ.ವೆಂಕಟರಾಜು ತಿಳಿಸಿದರು.
೧೯೭೩ರ ಡಿಸೆಂಬರ್ ೧೦ ರಂದು ಕಲಾವಿದರು ತಂಡವು ಪ್ರಾರಂಭವಾಯಿತು. ೨೦೨೩ರ ಅಕ್ಟೋಬರ್ ೧೦ಕ್ಕೆ ತಂಡವು ೫೦ ವರ್ಷ ಪೂರೈಸಿ ಸುವರ್ಣ ಸಂಭ್ರಮದ ಹೊಸ್ತಿಲಿನಲ್ಲಿದೆ. ಇದರ ಅಂಗವಾಗಿ ನಾಟಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ.೨೦ ರಂದು ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆಯುವ ಈ ಸುವರ್ಣ ಸಂಭ್ರಮ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ರಂಗ ನಿರ್ದೇಶಕ ಪ್ರಸನ್ನ ಅವರು ಚಾಲನೆ ನೀಡುವರು ಎಂದರು.
ವಿಜ್ಞಾನ ಲೇಖಕ ಕೊಳ್ಳೇಗಾಲ ಶರ್ಮ, ರಂಗಕರ್ಮಿ ಡಾ.ಶೀಲಾಕುಮಾರಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಎ.ಡಿ.ಸಿಲ್ವ ಅಧ್ಯಕ್ಷತೆ ವಹಿಸುತ್ತಾರೆ. ತದನಂತರ ಅರಿವು ಕಲಾ ಬಳಗದ ವತಿಯಿಂದ ಕ್ಯೂಇಡಿ ಎಂಬ ನಾಟಕ ಪ್ರದರ್ಶನ ಇರಲಿದೆ. ಯತೀಶ್ ಕೊಳ್ಳೇಗಾಲ ನಿರ್ದೇಶಿಸಿ ತಾವೇ ಅಭಿನಯಿಸಿದ್ದಾರೆ ಎಂದು ತಿಳಿಸಿದರು.
ಸುವರ್ಣ ಸಂಭ್ರಮದ ಪ್ರಯುಕ್ತ ಪ್ರತಿ ತಿಂಗಳು ಒಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುವುದು. ೨೦೨೩ರ ಅಕ್ಟೋಬರ್-ನವೆಂಬರ್ ತಿಂಗಳÀಲ್ಲಿ ೨ ಅಥವಾ ೩ ದಿನಗಳ ಕಾಲ ಉತ್ಸವ ನಡೆಸಲಾಗುತ್ತದೆ ಎಂದು ತಿಳಿಸಿದರು.
ನಾವು ಶಾಲೆ, ಕಾಲೇಜು ದಿವಸಗಳಲ್ಲಿ ನಾಟಕಗಳಲ್ಲಿ ಭಾಗವಹಿಸಿ ಆಸಕ್ತಿಯನ್ನು ತಳೆದವು. ಕಾಲೇಜು ವಿದ್ಯಾಭ್ಯಾಸ ಮುಗಿಸಿದ ನಂತರ ರಂಗ ಚಟುವಟಿಕೆಗೆ ಮೀಸಲಾದ ಹವ್ಯಾಸ ತಂಡ ಕಟ್ಟಬೇಕೆಂಬ ಉತ್ಕಟವಾದ ಬಯಕೆಯಿಂದ ಶಾಂತಲಾ ಕಲಾವಿದರ ತಂಡವನ್ನು ಕಟ್ಟಲಾಯಿತು ಎಂದರು.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…