ಜಿಲ್ಲೆಗಳು

ಸುವರ್ಣ ಸಂಭ್ರಮದಲ್ಲಿ ಶಾಂತಲಾ ಕಲಾವಿದರು ತಂಡ

ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ಸುದ್ದಿಗೋಷ್ಠಿಯಲ್ಲಿ ಕೆ.ವೆಂಕಟರಾಜು ಮಾಹಿತಿ

ಚಾಮರಾಜನಗರ: ಶಾಂತಲಾ ಕಲಾವಿದರು ತಂಡವು ೫೦ ವರ್ಷ ಪೂರೈಸಿ ಸುವರ್ಣ ಸಂಭ್ರಮ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಶಾಂತಲಾ ಕಲಾವಿದರು ಟ್ರಸ್ಟ್ನ ಕೆ.ವೆಂಕಟರಾಜು ತಿಳಿಸಿದರು.
೧೯೭೩ರ ಡಿಸೆಂಬರ್ ೧೦ ರಂದು ಕಲಾವಿದರು ತಂಡವು ಪ್ರಾರಂಭವಾಯಿತು. ೨೦೨೩ರ ಅಕ್ಟೋಬರ್ ೧೦ಕ್ಕೆ ತಂಡವು ೫೦ ವರ್ಷ ಪೂರೈಸಿ ಸುವರ್ಣ ಸಂಭ್ರಮದ ಹೊಸ್ತಿಲಿನಲ್ಲಿದೆ. ಇದರ ಅಂಗವಾಗಿ ನಾಟಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ.೨೦ ರಂದು ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆಯುವ ಈ ಸುವರ್ಣ ಸಂಭ್ರಮ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ರಂಗ ನಿರ್ದೇಶಕ ಪ್ರಸನ್ನ ಅವರು ಚಾಲನೆ ನೀಡುವರು ಎಂದರು.
ವಿಜ್ಞಾನ ಲೇಖಕ ಕೊಳ್ಳೇಗಾಲ ಶರ್ಮ, ರಂಗಕರ್ಮಿ ಡಾ.ಶೀಲಾಕುಮಾರಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಎ.ಡಿ.ಸಿಲ್ವ ಅಧ್ಯಕ್ಷತೆ ವಹಿಸುತ್ತಾರೆ. ತದನಂತರ ಅರಿವು ಕಲಾ ಬಳಗದ ವತಿಯಿಂದ ಕ್ಯೂಇಡಿ ಎಂಬ ನಾಟಕ ಪ್ರದರ್ಶನ ಇರಲಿದೆ. ಯತೀಶ್ ಕೊಳ್ಳೇಗಾಲ ನಿರ್ದೇಶಿಸಿ ತಾವೇ ಅಭಿನಯಿಸಿದ್ದಾರೆ ಎಂದು ತಿಳಿಸಿದರು.
ಸುವರ್ಣ ಸಂಭ್ರಮದ ಪ್ರಯುಕ್ತ ಪ್ರತಿ ತಿಂಗಳು ಒಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುವುದು. ೨೦೨೩ರ ಅಕ್ಟೋಬರ್-ನವೆಂಬರ್ ತಿಂಗಳÀಲ್ಲಿ ೨ ಅಥವಾ ೩ ದಿನಗಳ ಕಾಲ ಉತ್ಸವ ನಡೆಸಲಾಗುತ್ತದೆ ಎಂದು ತಿಳಿಸಿದರು.
ನಾವು ಶಾಲೆ, ಕಾಲೇಜು ದಿವಸಗಳಲ್ಲಿ ನಾಟಕಗಳಲ್ಲಿ ಭಾಗವಹಿಸಿ ಆಸಕ್ತಿಯನ್ನು ತಳೆದವು. ಕಾಲೇಜು ವಿದ್ಯಾಭ್ಯಾಸ ಮುಗಿಸಿದ ನಂತರ ರಂಗ ಚಟುವಟಿಕೆಗೆ ಮೀಸಲಾದ ಹವ್ಯಾಸ ತಂಡ ಕಟ್ಟಬೇಕೆಂಬ ಉತ್ಕಟವಾದ ಬಯಕೆಯಿಂದ ಶಾಂತಲಾ ಕಲಾವಿದರ ತಂಡವನ್ನು ಕಟ್ಟಲಾಯಿತು ಎಂದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

19 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

19 hours ago