ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ
ಸುದ್ದಿಗೋಷ್ಠಿಯಲ್ಲಿ ಕೆ.ವೆಂಕಟರಾಜು ಮಾಹಿತಿ
ಚಾಮರಾಜನಗರ: ಶಾಂತಲಾ ಕಲಾವಿದರು ತಂಡವು ೫೦ ವರ್ಷ ಪೂರೈಸಿ ಸುವರ್ಣ ಸಂಭ್ರಮ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಶಾಂತಲಾ ಕಲಾವಿದರು ಟ್ರಸ್ಟ್ನ ಕೆ.ವೆಂಕಟರಾಜು ತಿಳಿಸಿದರು.
೧೯೭೩ರ ಡಿಸೆಂಬರ್ ೧೦ ರಂದು ಕಲಾವಿದರು ತಂಡವು ಪ್ರಾರಂಭವಾಯಿತು. ೨೦೨೩ರ ಅಕ್ಟೋಬರ್ ೧೦ಕ್ಕೆ ತಂಡವು ೫೦ ವರ್ಷ ಪೂರೈಸಿ ಸುವರ್ಣ ಸಂಭ್ರಮದ ಹೊಸ್ತಿಲಿನಲ್ಲಿದೆ. ಇದರ ಅಂಗವಾಗಿ ನಾಟಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ.೨೦ ರಂದು ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆಯುವ ಈ ಸುವರ್ಣ ಸಂಭ್ರಮ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ರಂಗ ನಿರ್ದೇಶಕ ಪ್ರಸನ್ನ ಅವರು ಚಾಲನೆ ನೀಡುವರು ಎಂದರು.
ವಿಜ್ಞಾನ ಲೇಖಕ ಕೊಳ್ಳೇಗಾಲ ಶರ್ಮ, ರಂಗಕರ್ಮಿ ಡಾ.ಶೀಲಾಕುಮಾರಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಎ.ಡಿ.ಸಿಲ್ವ ಅಧ್ಯಕ್ಷತೆ ವಹಿಸುತ್ತಾರೆ. ತದನಂತರ ಅರಿವು ಕಲಾ ಬಳಗದ ವತಿಯಿಂದ ಕ್ಯೂಇಡಿ ಎಂಬ ನಾಟಕ ಪ್ರದರ್ಶನ ಇರಲಿದೆ. ಯತೀಶ್ ಕೊಳ್ಳೇಗಾಲ ನಿರ್ದೇಶಿಸಿ ತಾವೇ ಅಭಿನಯಿಸಿದ್ದಾರೆ ಎಂದು ತಿಳಿಸಿದರು.
ಸುವರ್ಣ ಸಂಭ್ರಮದ ಪ್ರಯುಕ್ತ ಪ್ರತಿ ತಿಂಗಳು ಒಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುವುದು. ೨೦೨೩ರ ಅಕ್ಟೋಬರ್-ನವೆಂಬರ್ ತಿಂಗಳÀಲ್ಲಿ ೨ ಅಥವಾ ೩ ದಿನಗಳ ಕಾಲ ಉತ್ಸವ ನಡೆಸಲಾಗುತ್ತದೆ ಎಂದು ತಿಳಿಸಿದರು.
ನಾವು ಶಾಲೆ, ಕಾಲೇಜು ದಿವಸಗಳಲ್ಲಿ ನಾಟಕಗಳಲ್ಲಿ ಭಾಗವಹಿಸಿ ಆಸಕ್ತಿಯನ್ನು ತಳೆದವು. ಕಾಲೇಜು ವಿದ್ಯಾಭ್ಯಾಸ ಮುಗಿಸಿದ ನಂತರ ರಂಗ ಚಟುವಟಿಕೆಗೆ ಮೀಸಲಾದ ಹವ್ಯಾಸ ತಂಡ ಕಟ್ಟಬೇಕೆಂಬ ಉತ್ಕಟವಾದ ಬಯಕೆಯಿಂದ ಶಾಂತಲಾ ಕಲಾವಿದರ ತಂಡವನ್ನು ಕಟ್ಟಲಾಯಿತು ಎಂದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…