ಜಿಲ್ಲೆಗಳು

ಮಂಡ್ಯ: ಅ.31ರವರೆಗೆ ಸ್ವಚ್ಛ ಭಾರತ 2.0 ಅಭಿಯಾನ

ಮಂಡ್ಯ: ಸಾರ್ವಜನಿಕರ ಸಹಭಾಗೀತ್ವದಲ್ಲಿ ಅ.೧ರಿಂದ ೩೧ರವರೆಗೆ ನಡೆಯಲಿರುವ ‘ಸ್ವಚ್ಛ ಭಾರತ ೨.೦’ ಅಭಿಯಾನದಲ್ಲಿ ದೇಶಾದ್ಯಂತ ೧ ಕೋಟಿ ಕಿಲೋ ಏಕಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸಿ ವಿಲೇವಾರಿಗೆ ಗುರಿ ಹೊಂದಲಾಗಿದೆ ಎಂದು ನೆಹರು ಯುವ ಕೇಂದ್ರದ(ಎನ್‌ವೈಕೆ) ರಾಜ್ಯ ನಿರ್ದೇಶಕ ಎಂ.ಎನ್.ನಟರಾಜ್ ತಿಳಿಸಿದರು.

ಕಳೆದ ವರ್ಷ ನಡೆದ ‘ಸ್ವಚ್ಛ ಭಾರತ’ ಅಭಿಯಾನದ ಯಶಸ್ಸಿನ ಹಿನ್ನೆಲೆಯಲ್ಲಿ ಈ ವರ್ಷ ಅ.೧ರಿಂದ ‘ಸ್ವಚ್ಛ ಭಾರತ ೨.೦’ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಎನ್‌ವೈಕೆ, ಯುವ ಕ್ಲಬ್‌ಗಳು, ಎನ್‌ಸಿಸಿ, ಎನ್‌ಎಸ್‌ಎಸ್ ಘಟಕಗಳು, ಸ್ಕೌಟ್ಸ್ ಅಂಡ್ ಗೈಡ್ಸ್ ಮೂಲಕ ದೇಶಾದ್ಯಂತ ಎಲ್ಲ ಗ್ರಾಮಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಮುಖ್ಯವಾಗಿ ಏಕ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ, ಅದನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು, ಪ್ಲಾಸ್ಟಿಕ್ ಬಗ್ಗೆ ಜನಜಾಗೃತಿ ಮೂಡಿಸುವುದು ‘ಸ್ವಚ್ಛ ಭಾರತ ೨.೦’ ಅಭಿಯಾನದ ಉದ್ದೇಶವಾಗಿದೆ. ಗ್ರಾಮ ಮಟ್ಟದಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್‌ ಅನ್ನು ಗ್ರಾಪಂ ಪಿಡಿಒಗೆ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಮೂಲಕ ನಗರಸಭೆ ವ್ಯಾಪ್ತಿಯಲ್ಲಿ ಪೌರಾಯುಕ್ತರು, ಪಟ್ಟಣ ಪ್ರದೇಶಗಳಲ್ಲಿ, ಪುರಸಭೆ/ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳಿಗೆ ನೀಡಿ, ಎಷ್ಟು ಕಿಲೋ ಪ್ಲಾಸ್ಟಿಕ್ ನೀಡಲಾಗಿದೆ ಎಂಬುದಕ್ಕೆ ಸ್ವೀಕೃತಿ ಪತ್ರ ಪಡೆದುಕೊಳ್ಳಬಹುದು ಎಂದರು.

ದೇಶದ ೭೪೪ ಜಿಲ್ಲೆಗಳಲ್ಲು ‘ಸ್ವಚ್ಛ ಭಾರತ ೨.೦’ ಅಭಿಯಾನ ನಡೆಯುತ್ತಿದೆ. ಕರ್ನಾಟಕದ ೩೧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಈ ಅಭಿಯಾನದಲ್ಲಿ ೪.೧೦ ಲಕ್ಷ ಕಿಲೋ ಏಕಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಕೆಲವೆಡೆ ಅಧಿಕ ಪ್ರಮಾಣದಲ್ಲಿ ಪ್ಲಾಸ್ಟಿಕ್ ಸಂಗ್ರಹವಾಗುತ್ತಿದ್ದು, ಅದರ ದಾಸ್ತಾನು ಸವಾಲಾಗಿದೆ. ಹೀಗಾಗಿ ಅಂತಹ ಕಡೆಗಳಲ್ಲಿ ಸ್ಥಳೀಯವಾಗಿಯೇ ಪ್ಲಾಸ್ಟಿಕ್ ವಿಲೇವಾರಿಗೆ ಕ್ರಮ ವಹಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾುಂಕ ನಿರ್ದೇಶಕ ಜಿ.ಓಂಪ್ರಕಾಶ್, ವಿವಿಧ ಕಾಲೇಜುಗಳ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ.ಎಂ.ಕೆ.ಕೆಂಪಮ್ಮ, ಕೆ.ಬಿ.ಲೋಕೇಶ್, ಡಿ.ಉಮೇಶ್, ಎನ್‌ವೈಕೆ ಲೆಕ್ಕಾಧಿಕಾರಿ ಚಿಂದಗಿರಿಗೌಡ, ನಿವೃತ್ತ ಲೆಕ್ಕಾಧಿಕಾರಿ ಬಸವರಾಜು ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

 

andolana

Recent Posts

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

1 hour ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

1 hour ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

1 hour ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

1 hour ago

ಓದುಗರ ಪತ್ರ: ವಿಷಯದ ಗಂಭೀರತೆ ಮರೆತ ಪೊಲೀಸರು

ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…

1 hour ago

ಓದುಗರ ಪತ್ರ: ಇಂಧನದ ಮೇಲಿನ ತೆರಿಗೆ ಇಳಿಸಿ

ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…

2 hours ago