Mysore
24
broken clouds

Social Media

ಬುಧವಾರ, 30 ಏಪ್ರಿಲ 2025
Light
Dark

ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘ : 10 ಲಕ್ಷ ಮಂದಿಗೆ ಉದ್ಯೋಗ : ಸಿಎಂ ಬೊಮ್ಮಾಯಿ

ಬೆಂಗಳೂರು : ಗ್ರಾಮೀಣ ಮಟ್ಟದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘವನ್ನು ಸ್ಥಾಪಿಸುವ ಮೂಲಕ 10 ಲಕ್ಷ ಉದ್ಯೋಗವನ್ನು ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘ ಸ್ಥಾಪಿಸಿ 10 ಲಕ್ಷದ ಯೋಜನೆ ಮತ್ತು ಮಾರುಕಟ್ಟೆ ವ್ಯತವಸ್ಥೆಯನ್ನು ಕಲ್ಪಿಸುವ ಮೂಲಕ ಈ ಸಂಘದಲ್ಲಿ ಹಿಂದುಳಿದ ಸಮುದಾಯದ ಯುವಕರಿಗೆ ಹೆಚ್ಚು ಅವಕಾಶವನ್ನು ಕಲ್ಪಿಸಲಾಗುವುದು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ  ಅರಸು ಅವರ 107 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಪ್ರತಿ ಗ್ರಾಮಗಳಲ್ಲಿ ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘವನ್ನು ಸ್ಥಾಪಿಸುವ ಮೂಲಕ 5 ಲಕ್ಷ ಯುವಕರು ಮತ್ತು 5 ಲಕ್ಷ ಯುವತಿಯರಿಗೆ ಉದ್ಯೋಗ ನೀಡಲಾಗುವುದು. ಎಂದರು.

ಕರ್ನಾಟಕದ ಇವತ್ತಿನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕದ ಯಶಸ್ಸಿಗೆ ಬಹುಪಾಲು ಅರಸು ಅವರ ದೂರದೃಷ್ಟಿಯೇ ಕಾರಣ.ಮುಖ್ಯಮಂತ್ರಿ ಆದಮೇಲೆ ಭೂ ಸುಧಾರಣೆ ಕಾಯ್ದೆ ಜÁರಿಗೆ ತಂದರು. ಉಳುವವನೇ ಒಡೆಯ ಚಳವಳಿಗೆ ಕಾನೂನಿನ ಶಕ್ತಿ ತುಂಬಿದರು. ಜನತಾ ಮನೆ, ಪಡಿತರ ವ್ಯವಸ್ಥೆ ಆರಂಭವಾಗಿದ್ದು ಅರಸು ಕಾಲದಲ್ಲಿ ವ್ಯವಸಾಯದಲ್ಲಿ ಸುಧಾರಣೆ ತಂದಿದ್ದು ಅರಸು ಅವರು. ಕಾಳಿ ವಿದ್ಯುತ್ ಯೋಜನೆ ತಂದರು, ಸಣ್ಣ ಸಣ್ಣ ಸಮಾಜದಲ್ಲಿನವರನ್ನ ಗುರುತಿಸಿ ನಾಯಕತ್ವ ಬೆಳೆಸಿದರು, ಸಾಮಾಜಿಕ ನ್ಯಾಯ ಪ್ರತಿಪಾದಿಸಿ ಜÁರಿಗೆ ತಂದರು. ಆದರೆ ಇಂದು ಸಾಮಾಜಿಕ ನ್ಯಾಯ ಪ್ರತಿಪಾದನೆ ಕೇವಲ ಭಾಷಣಕ್ಕೆ ಸೀಮಿತವಾಗಿದೆ ಎಂದು ವಿಷಾದಿಸಿದರು.


ಸಮಾಜದ ಕಟ್ಟಕಡೆಯವರಿಗೆ ನ್ಯಾಯ ಸಿಗಬೇಕಿದೆ. 2439 ಹಾಸ್ಟೆಲ್ ಗಳು ರಾಜ್ಯದಲ್ಲಿವೆ ಇವುಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು ದೇವರಾಜ ಅರಸು ಹೆಸರಲ್ಲಿ ಪಿಹೆಚ್‍ಡಿ ಮಾಡುತ್ತಿರುವವರಿಗೆ ಹೆಚ್ಚಿನ ಅನುದಾನ ಕೊಡಲಾಗುವುದು ಎಂದು ತಿಳಿಸಿದರು. ಈವರೆಗೆ ನಿಂತುಹೋಗಿದ್ದ ಮಹಿಳೆಯರಿಗೆ ಟೈಲರಿಂಗ್ ತರಬೇತಿ ಮುಂದುವರಿಸುತ್ತೇವೆ. ಹಿಂದುಳಿದ ವರ್ಗದ ನಿಗಮ ಮಂಡಳಿಗೆ ಹೆಚ್ಚಿನ ಅನುದಾನ ನೀಡಿ, 5 ಲಕ್ಷ ಜನರಿಗೆ ಪುನರ್‍ಕೆಲಸ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಇತ್ತೀಚೆಗೆ ಹಿಂದುಳಿದ ಮಠಗಳು ಉತ್ತಮ ಕೆಲಸ ಮಾಡುತ್ತಿವೆ. ಹಿಂದುಳಿದ ಮಠಗಳಿಗೆ 129 ಕೋಟಿ ಅನುದಾನ ಬಿಡುಗಡೆಮಾಡಿದ್ದೇವೆ ಎಂದರು.
ಸಚಿವ ಕೋಟಾ ಶ್ರಿನಿವಾಸ್ ಪೂಜಾರಿ ಮಾತನಾಡಿ, ಇಂದು ನನ್ನ ಇಲಾಖೆ ಅತ್ಯಂತ ಸಂಭ್ರಮದ ದಿನ. ದ್ವನಿ ಇಲ್ಲದವರಿಗೆ ಧ್ವನಿಯಾಗಿ, ಶೋಷಿತರ ಹಿಂದುಳಿದವರ ಬಂಧು ಅರಸು ಜನ್ಮ ದಿನ. ಅರಸು ಹೇಗೆ ಆಡಳಿತಾತ್ಮಕ ಶಕ್ತಿ ಕೊಟ್ಟರೋ ಹಾಗೆ ನಮ್ಮ ಸಿಎಂ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ವಿಶ್ವಾಸ ಇದೆ ಎಂದರು.
ಕುಂಬಾರ, ನೇಕಾರ ಸೇರಿದಂತೆ ಕುಲಕಸುಬುಗಳ ಉತ್ಪನ್ನಗಳ ಮಾರಾಟ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆಯಿಂದ ಉತ್ತರ ಕರ್ನಾಟಕ, ಮಂಗಳೂರು ಭಾಗದಲ್ಲಿ ಸೇನಾ ಪೂರ್ವ ತರಬೇತಿ ಶಾಲೆ ಆರಂಭ ಮಾಡುವುದಾಗಿ ಪ್ರಕಟಿಸಿದರು.
ಶಾಸಕ ಕುಮಾರ್ ಬಂಗಾರಪ್ಪ, ಪಿ.ರಾಜೀವ್, ಎಂಎಲ್‍ಸಿಗಳಾದ ಹೇಮಲತಾ ನಾಯಕ್, ಬಾಬುರಾವ್ ಚಿಂಚನಸೂರ್ ಉಪಸ್ಥಿತರಿದ್ದರು.

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ