ಜಿಲ್ಲೆಗಳು

ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘ : 10 ಲಕ್ಷ ಮಂದಿಗೆ ಉದ್ಯೋಗ : ಸಿಎಂ ಬೊಮ್ಮಾಯಿ

ಬೆಂಗಳೂರು : ಗ್ರಾಮೀಣ ಮಟ್ಟದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘವನ್ನು ಸ್ಥಾಪಿಸುವ ಮೂಲಕ 10 ಲಕ್ಷ ಉದ್ಯೋಗವನ್ನು ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘ ಸ್ಥಾಪಿಸಿ 10 ಲಕ್ಷದ ಯೋಜನೆ ಮತ್ತು ಮಾರುಕಟ್ಟೆ ವ್ಯತವಸ್ಥೆಯನ್ನು ಕಲ್ಪಿಸುವ ಮೂಲಕ ಈ ಸಂಘದಲ್ಲಿ ಹಿಂದುಳಿದ ಸಮುದಾಯದ ಯುವಕರಿಗೆ ಹೆಚ್ಚು ಅವಕಾಶವನ್ನು ಕಲ್ಪಿಸಲಾಗುವುದು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ  ಅರಸು ಅವರ 107 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಪ್ರತಿ ಗ್ರಾಮಗಳಲ್ಲಿ ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘವನ್ನು ಸ್ಥಾಪಿಸುವ ಮೂಲಕ 5 ಲಕ್ಷ ಯುವಕರು ಮತ್ತು 5 ಲಕ್ಷ ಯುವತಿಯರಿಗೆ ಉದ್ಯೋಗ ನೀಡಲಾಗುವುದು. ಎಂದರು.

ಕರ್ನಾಟಕದ ಇವತ್ತಿನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕದ ಯಶಸ್ಸಿಗೆ ಬಹುಪಾಲು ಅರಸು ಅವರ ದೂರದೃಷ್ಟಿಯೇ ಕಾರಣ.ಮುಖ್ಯಮಂತ್ರಿ ಆದಮೇಲೆ ಭೂ ಸುಧಾರಣೆ ಕಾಯ್ದೆ ಜÁರಿಗೆ ತಂದರು. ಉಳುವವನೇ ಒಡೆಯ ಚಳವಳಿಗೆ ಕಾನೂನಿನ ಶಕ್ತಿ ತುಂಬಿದರು. ಜನತಾ ಮನೆ, ಪಡಿತರ ವ್ಯವಸ್ಥೆ ಆರಂಭವಾಗಿದ್ದು ಅರಸು ಕಾಲದಲ್ಲಿ ವ್ಯವಸಾಯದಲ್ಲಿ ಸುಧಾರಣೆ ತಂದಿದ್ದು ಅರಸು ಅವರು. ಕಾಳಿ ವಿದ್ಯುತ್ ಯೋಜನೆ ತಂದರು, ಸಣ್ಣ ಸಣ್ಣ ಸಮಾಜದಲ್ಲಿನವರನ್ನ ಗುರುತಿಸಿ ನಾಯಕತ್ವ ಬೆಳೆಸಿದರು, ಸಾಮಾಜಿಕ ನ್ಯಾಯ ಪ್ರತಿಪಾದಿಸಿ ಜÁರಿಗೆ ತಂದರು. ಆದರೆ ಇಂದು ಸಾಮಾಜಿಕ ನ್ಯಾಯ ಪ್ರತಿಪಾದನೆ ಕೇವಲ ಭಾಷಣಕ್ಕೆ ಸೀಮಿತವಾಗಿದೆ ಎಂದು ವಿಷಾದಿಸಿದರು.


ಸಮಾಜದ ಕಟ್ಟಕಡೆಯವರಿಗೆ ನ್ಯಾಯ ಸಿಗಬೇಕಿದೆ. 2439 ಹಾಸ್ಟೆಲ್ ಗಳು ರಾಜ್ಯದಲ್ಲಿವೆ ಇವುಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು ದೇವರಾಜ ಅರಸು ಹೆಸರಲ್ಲಿ ಪಿಹೆಚ್‍ಡಿ ಮಾಡುತ್ತಿರುವವರಿಗೆ ಹೆಚ್ಚಿನ ಅನುದಾನ ಕೊಡಲಾಗುವುದು ಎಂದು ತಿಳಿಸಿದರು. ಈವರೆಗೆ ನಿಂತುಹೋಗಿದ್ದ ಮಹಿಳೆಯರಿಗೆ ಟೈಲರಿಂಗ್ ತರಬೇತಿ ಮುಂದುವರಿಸುತ್ತೇವೆ. ಹಿಂದುಳಿದ ವರ್ಗದ ನಿಗಮ ಮಂಡಳಿಗೆ ಹೆಚ್ಚಿನ ಅನುದಾನ ನೀಡಿ, 5 ಲಕ್ಷ ಜನರಿಗೆ ಪುನರ್‍ಕೆಲಸ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಇತ್ತೀಚೆಗೆ ಹಿಂದುಳಿದ ಮಠಗಳು ಉತ್ತಮ ಕೆಲಸ ಮಾಡುತ್ತಿವೆ. ಹಿಂದುಳಿದ ಮಠಗಳಿಗೆ 129 ಕೋಟಿ ಅನುದಾನ ಬಿಡುಗಡೆಮಾಡಿದ್ದೇವೆ ಎಂದರು.
ಸಚಿವ ಕೋಟಾ ಶ್ರಿನಿವಾಸ್ ಪೂಜಾರಿ ಮಾತನಾಡಿ, ಇಂದು ನನ್ನ ಇಲಾಖೆ ಅತ್ಯಂತ ಸಂಭ್ರಮದ ದಿನ. ದ್ವನಿ ಇಲ್ಲದವರಿಗೆ ಧ್ವನಿಯಾಗಿ, ಶೋಷಿತರ ಹಿಂದುಳಿದವರ ಬಂಧು ಅರಸು ಜನ್ಮ ದಿನ. ಅರಸು ಹೇಗೆ ಆಡಳಿತಾತ್ಮಕ ಶಕ್ತಿ ಕೊಟ್ಟರೋ ಹಾಗೆ ನಮ್ಮ ಸಿಎಂ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ವಿಶ್ವಾಸ ಇದೆ ಎಂದರು.
ಕುಂಬಾರ, ನೇಕಾರ ಸೇರಿದಂತೆ ಕುಲಕಸುಬುಗಳ ಉತ್ಪನ್ನಗಳ ಮಾರಾಟ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆಯಿಂದ ಉತ್ತರ ಕರ್ನಾಟಕ, ಮಂಗಳೂರು ಭಾಗದಲ್ಲಿ ಸೇನಾ ಪೂರ್ವ ತರಬೇತಿ ಶಾಲೆ ಆರಂಭ ಮಾಡುವುದಾಗಿ ಪ್ರಕಟಿಸಿದರು.
ಶಾಸಕ ಕುಮಾರ್ ಬಂಗಾರಪ್ಪ, ಪಿ.ರಾಜೀವ್, ಎಂಎಲ್‍ಸಿಗಳಾದ ಹೇಮಲತಾ ನಾಯಕ್, ಬಾಬುರಾವ್ ಚಿಂಚನಸೂರ್ ಉಪಸ್ಥಿತರಿದ್ದರು.

 

 

andolanait

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

3 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

3 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

3 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

4 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

6 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

7 hours ago