ಜಿಲ್ಲೆಗಳು

ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘ : 10 ಲಕ್ಷ ಮಂದಿಗೆ ಉದ್ಯೋಗ : ಸಿಎಂ ಬೊಮ್ಮಾಯಿ

ಬೆಂಗಳೂರು : ಗ್ರಾಮೀಣ ಮಟ್ಟದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘವನ್ನು ಸ್ಥಾಪಿಸುವ ಮೂಲಕ 10 ಲಕ್ಷ ಉದ್ಯೋಗವನ್ನು ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘ ಸ್ಥಾಪಿಸಿ 10 ಲಕ್ಷದ ಯೋಜನೆ ಮತ್ತು ಮಾರುಕಟ್ಟೆ ವ್ಯತವಸ್ಥೆಯನ್ನು ಕಲ್ಪಿಸುವ ಮೂಲಕ ಈ ಸಂಘದಲ್ಲಿ ಹಿಂದುಳಿದ ಸಮುದಾಯದ ಯುವಕರಿಗೆ ಹೆಚ್ಚು ಅವಕಾಶವನ್ನು ಕಲ್ಪಿಸಲಾಗುವುದು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ  ಅರಸು ಅವರ 107 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಪ್ರತಿ ಗ್ರಾಮಗಳಲ್ಲಿ ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘವನ್ನು ಸ್ಥಾಪಿಸುವ ಮೂಲಕ 5 ಲಕ್ಷ ಯುವಕರು ಮತ್ತು 5 ಲಕ್ಷ ಯುವತಿಯರಿಗೆ ಉದ್ಯೋಗ ನೀಡಲಾಗುವುದು. ಎಂದರು.

ಕರ್ನಾಟಕದ ಇವತ್ತಿನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕದ ಯಶಸ್ಸಿಗೆ ಬಹುಪಾಲು ಅರಸು ಅವರ ದೂರದೃಷ್ಟಿಯೇ ಕಾರಣ.ಮುಖ್ಯಮಂತ್ರಿ ಆದಮೇಲೆ ಭೂ ಸುಧಾರಣೆ ಕಾಯ್ದೆ ಜÁರಿಗೆ ತಂದರು. ಉಳುವವನೇ ಒಡೆಯ ಚಳವಳಿಗೆ ಕಾನೂನಿನ ಶಕ್ತಿ ತುಂಬಿದರು. ಜನತಾ ಮನೆ, ಪಡಿತರ ವ್ಯವಸ್ಥೆ ಆರಂಭವಾಗಿದ್ದು ಅರಸು ಕಾಲದಲ್ಲಿ ವ್ಯವಸಾಯದಲ್ಲಿ ಸುಧಾರಣೆ ತಂದಿದ್ದು ಅರಸು ಅವರು. ಕಾಳಿ ವಿದ್ಯುತ್ ಯೋಜನೆ ತಂದರು, ಸಣ್ಣ ಸಣ್ಣ ಸಮಾಜದಲ್ಲಿನವರನ್ನ ಗುರುತಿಸಿ ನಾಯಕತ್ವ ಬೆಳೆಸಿದರು, ಸಾಮಾಜಿಕ ನ್ಯಾಯ ಪ್ರತಿಪಾದಿಸಿ ಜÁರಿಗೆ ತಂದರು. ಆದರೆ ಇಂದು ಸಾಮಾಜಿಕ ನ್ಯಾಯ ಪ್ರತಿಪಾದನೆ ಕೇವಲ ಭಾಷಣಕ್ಕೆ ಸೀಮಿತವಾಗಿದೆ ಎಂದು ವಿಷಾದಿಸಿದರು.


ಸಮಾಜದ ಕಟ್ಟಕಡೆಯವರಿಗೆ ನ್ಯಾಯ ಸಿಗಬೇಕಿದೆ. 2439 ಹಾಸ್ಟೆಲ್ ಗಳು ರಾಜ್ಯದಲ್ಲಿವೆ ಇವುಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು ದೇವರಾಜ ಅರಸು ಹೆಸರಲ್ಲಿ ಪಿಹೆಚ್‍ಡಿ ಮಾಡುತ್ತಿರುವವರಿಗೆ ಹೆಚ್ಚಿನ ಅನುದಾನ ಕೊಡಲಾಗುವುದು ಎಂದು ತಿಳಿಸಿದರು. ಈವರೆಗೆ ನಿಂತುಹೋಗಿದ್ದ ಮಹಿಳೆಯರಿಗೆ ಟೈಲರಿಂಗ್ ತರಬೇತಿ ಮುಂದುವರಿಸುತ್ತೇವೆ. ಹಿಂದುಳಿದ ವರ್ಗದ ನಿಗಮ ಮಂಡಳಿಗೆ ಹೆಚ್ಚಿನ ಅನುದಾನ ನೀಡಿ, 5 ಲಕ್ಷ ಜನರಿಗೆ ಪುನರ್‍ಕೆಲಸ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಇತ್ತೀಚೆಗೆ ಹಿಂದುಳಿದ ಮಠಗಳು ಉತ್ತಮ ಕೆಲಸ ಮಾಡುತ್ತಿವೆ. ಹಿಂದುಳಿದ ಮಠಗಳಿಗೆ 129 ಕೋಟಿ ಅನುದಾನ ಬಿಡುಗಡೆಮಾಡಿದ್ದೇವೆ ಎಂದರು.
ಸಚಿವ ಕೋಟಾ ಶ್ರಿನಿವಾಸ್ ಪೂಜಾರಿ ಮಾತನಾಡಿ, ಇಂದು ನನ್ನ ಇಲಾಖೆ ಅತ್ಯಂತ ಸಂಭ್ರಮದ ದಿನ. ದ್ವನಿ ಇಲ್ಲದವರಿಗೆ ಧ್ವನಿಯಾಗಿ, ಶೋಷಿತರ ಹಿಂದುಳಿದವರ ಬಂಧು ಅರಸು ಜನ್ಮ ದಿನ. ಅರಸು ಹೇಗೆ ಆಡಳಿತಾತ್ಮಕ ಶಕ್ತಿ ಕೊಟ್ಟರೋ ಹಾಗೆ ನಮ್ಮ ಸಿಎಂ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ವಿಶ್ವಾಸ ಇದೆ ಎಂದರು.
ಕುಂಬಾರ, ನೇಕಾರ ಸೇರಿದಂತೆ ಕುಲಕಸುಬುಗಳ ಉತ್ಪನ್ನಗಳ ಮಾರಾಟ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆಯಿಂದ ಉತ್ತರ ಕರ್ನಾಟಕ, ಮಂಗಳೂರು ಭಾಗದಲ್ಲಿ ಸೇನಾ ಪೂರ್ವ ತರಬೇತಿ ಶಾಲೆ ಆರಂಭ ಮಾಡುವುದಾಗಿ ಪ್ರಕಟಿಸಿದರು.
ಶಾಸಕ ಕುಮಾರ್ ಬಂಗಾರಪ್ಪ, ಪಿ.ರಾಜೀವ್, ಎಂಎಲ್‍ಸಿಗಳಾದ ಹೇಮಲತಾ ನಾಯಕ್, ಬಾಬುರಾವ್ ಚಿಂಚನಸೂರ್ ಉಪಸ್ಥಿತರಿದ್ದರು.

 

 

andolanait

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

3 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

3 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

16 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

18 hours ago