ಜಿಲ್ಲೆಗಳು

ಈಜುಕೊಳ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವಾರ್ಡ್-೨೧ಕ್ಕೆ ಸೇರಿದ ಪಾರ್ಕ್ ಅಭಿವೃದ್ದಿ ಹಾಗೂ ಈಜುಕೊಳ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಭೂಮಿ ಪೂಜೆ ನೆರವೇರಿಸಿದರು.

ಶಾಸಕರ ವಿವೇಚನಾ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ವಿಶೇಷ ಪ್ಯಾಕೇಜ್ ಅನುದಾನದಲ್ಲಿ ೧೦ ಲಕ್ಷ ರೂ. ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಈಜು ಕೊಳ ಮುಂಭಾಗದ ವಿಶಾಲವಾದ ಜಾಗವು ಅಶುಚಿತ್ವದಿಂದ ಕೂಡಿದ್ದು, ಈ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಶಾಸಕರು ಸ್ಥಳ ಪರಿಶೀಲಿಸಿ, ಈ ಜಾಗದಲ್ಲಿ ತಿರುಗಾಡಲು ಉತ್ತಮ ರಸ್ತೆ, ಬೋಗಾದಿ ರಸ್ತೆಗೆ ಸೇರುವಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾ ಣ, ಇಂಟರ್ ಲಾಕಿಂಗ್, ಕುಳಿತುಕೊಳ್ಳಲು ಉತ್ತಮ ಕಾಂಕ್ರೀಟ್ ಆಸನ,ಮೇಲ್ಛಾವಣಿ ಮುಂತಾದ ನವೀನ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಅಂದಾಜು ಪಟ್ಟಿ ತಯಾರಿಸಿ ಅಗತ್ಯಅನುದಾನ ನೀಡಿ ಕಾಮಗಾರಿ ಪ್ರಾರಂಭಿಸಲು ಸೂಚಿಸಿದರು.

ಪಾಲಿಕೆ ಉಪ ಆಯುಕ್ತ ಮಹೇಶ್, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎ.ಹೇಮಂತ್ ಕುಮಾರಗೌಡ, ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್, ಚಾಮರಾಜ ಕ್ಷೇತ್ರದ ಉಪಾಧ್ಯಕ್ಷ ಶಿವಕುಮಾರ್, ವಾರ್ಡ್ ಅಧ್ಯಕ್ಷ ಸೋಮಶೇಖರ ರಾಜೇ ಅರಸು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್, ಪುನೀತ್, ಬಿಎಲ್‌ಎ-೧ ದಿನೇಶ್ ಗೌಡ, ನವೀನ್, ಚಲುವ, ಗುತ್ತಿಗೆದಾರ ಅರವಿಂದ್, ಇಂಜಿನಿಯರ್ ವೇಣುಗೋಪಾಲ್, ಪಿ.ಕೆ.ಕೃಷ್ಣರಾಜು ಹಾಜರಿದ್ದರು.

ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ವಿಶೇಷ ಪ್ಯಾಕೇಜ್ ಅನುದಾನದಲ್ಲಿ ವಾರ್ಡ್-೨೧ ಕ್ಕೆ ಸೇರಿದ ಪಾರ್ಕ್ ಅಭಿವೃದ್ಧಿ ಹಾಗೂ ಈಜುಕೊಳ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಭೂಮಿ ಪೂಜೆ ನೆರವೇರಿಸಿದರು.

 

 

andolana

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

47 mins ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

2 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

3 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

4 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

9 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

9 hours ago