ತಿ.ನರಸೀಪುರ : -ತಾಲೂಕಿನ ಮುಸುವಿನ ಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿನಲ್ಲಿ ಫೆಬ್ರವರಿ 10ರಂದು ಜೋಡಿ ಚಿರುತೆಗಳು ಬೋನಿಗೆ ಬಿದ್ದಿದ್ದವು, ಅದೇ ಬೋನಿಗೆ ಮಂಗಳವಾರ ರಾತ್ರಿ 9:00 ಸಮಯದಲ್ಲಿ ಎಂಟು ತಿಂಗಳ ಮರಿ ಚಿರತೆ ಬೋನಿಗೆ ಬಿದ್ದಿದೆ.
ತಾಲೂಕಿನಾದ್ಯಂತ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಚಿರತೆ ಚಲನ ವಲನಗಳನ್ನು ಗುರುತಿಸಿ ವಿವಿಧ ಗ್ರಾಮಗಳ ಆಯ್ದ ಸ್ಥಳಗಳಲ್ಲಿ ಚಿರತೆ ಸೆರೆಗೆ ಬೋನುಗಳನ್ನು ಇರಿಸಿದ್ದರು. ತಾಯಿ ಹಾಗೂ ಮರೀಚಿರತೆ ಬೋನಿಗೆ ಬೀಳುವ ಮೂಲಕ ಮತ್ತೊಂದು ಮರಿ ಚಿರತೆ ಇದೆ ಎಂಬ ಆತಂಕ ಎಲ್ಲರಲ್ಲಿ ಮನೆ ಮೂಡಿತ್ತು, ಈಗ ಆ ಮರಿಚಿರತೆ ಇಂದು ಬೋನಿಗೆ ಬೀಳುವ ಮೂಲಕ ನಾಗರಿಕಲ್ಲಿ ಮೂಡಿರುವ ಆತಂಕ ಸ್ವಲ್ಪಮಟ್ಟಿಗೆ ವಿರಾಮ ದೊರಕಿದಂತಾಗಿದೆ,
ಇಂದು ಸಂಜೆ ಗ್ರಾಮದ ಚಂದ್ರಪ್ಪ ಎಂಬುವರ ಜಮೀನಿನಲ್ಲಿ ಇಟ್ಟಿದ್ದ ಭೂಮಿನೊಳಗೆ ಮೇಕೆ ಮರಿ ಕಟ್ಟಿ ಹಾಕಲಾಗಿತ್ತು ಅದನ್ನು ತಿನ್ನಲು ಬಂದ ಎಂಟು ತಿಂಗಳ ಮರಿ ಚಿರತೆ ಸರಿಯಾಗಿದೆ, ಸೆರೆ ಸಿಕ್ಕ ಚಿಗತೆಮರಿಯನ್ನು ರಾತ್ರಿಯೇ ಮೈಸೂರು ಅರಣ್ಯ ಭವನಕ್ಕೆ ಸಾಗಿಸಲಾಯಿತು ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ, ನಂತರ ಅರಣ್ಯ ಅಧಿಕಾರಿಗಳ ಆದೇಶದ ಮೇರೆಗೆ ಮುಂದಿನ ಕ್ರಮ ಜರಿಸಲಾಗುವುದು,
ಸ್ಥಳಕ್ಕೆ ತಿ. ನರಸೀಪುರ ವಲಯ ಅರಣಾಧಿಕಾರಿ ಸಯಿದ್ ನದೀಮ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಚಿರತೆ ಬಲೆಗೆ ಬಿದ್ದ ಸುದ್ದಿ ಹಬ್ಬುತ್ತಿದ್ದಂತೆ ಗ್ರಾಮಸ್ಥರು ರಾತ್ರಿ ವೇಳೆಯಾದರೂ ಚಿರತೆಯನ್ನು ವೀಕ್ಷಣೆ ಮಾಡಲು ಜಮಾವಣೆಗೊಂಡಿದ್ದರು.
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…
ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…
ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…
ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…