ಜಿಲ್ಲೆಗಳು

ತಿ.ನರಸೀಪುರ : ಮುಸುವಿನ‌ಕೊಪ್ಪಲು ಗ್ರಾಮದಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ

ತಿ.ನರಸೀಪುರ :  -ತಾಲೂಕಿನ ಮುಸುವಿನ ಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿನಲ್ಲಿ ಫೆಬ್ರವರಿ 10ರಂದು ಜೋಡಿ ಚಿರುತೆಗಳು ಬೋನಿಗೆ ಬಿದ್ದಿದ್ದವು, ಅದೇ ಬೋನಿಗೆ ಮಂಗಳವಾರ ರಾತ್ರಿ 9:00 ಸಮಯದಲ್ಲಿ ಎಂಟು ತಿಂಗಳ ಮರಿ ಚಿರತೆ ಬೋನಿಗೆ ಬಿದ್ದಿದೆ.

ತಾಲೂಕಿನಾದ್ಯಂತ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಚಿರತೆ ಚಲನ ವಲನಗಳನ್ನು ಗುರುತಿಸಿ ವಿವಿಧ ಗ್ರಾಮಗಳ ಆಯ್ದ ಸ್ಥಳಗಳಲ್ಲಿ ಚಿರತೆ ಸೆರೆಗೆ ಬೋನುಗಳನ್ನು ಇರಿಸಿದ್ದರು. ತಾಯಿ ಹಾಗೂ ಮರೀಚಿರತೆ ಬೋನಿಗೆ ಬೀಳುವ ಮೂಲಕ ಮತ್ತೊಂದು ಮರಿ ಚಿರತೆ ಇದೆ ಎಂಬ ಆತಂಕ ಎಲ್ಲರಲ್ಲಿ ಮನೆ ಮೂಡಿತ್ತು, ಈಗ ಆ ಮರಿಚಿರತೆ ಇಂದು ಬೋನಿಗೆ ಬೀಳುವ ಮೂಲಕ ನಾಗರಿಕಲ್ಲಿ ಮೂಡಿರುವ ಆತಂಕ ಸ್ವಲ್ಪಮಟ್ಟಿಗೆ ವಿರಾಮ ದೊರಕಿದಂತಾಗಿದೆ,

ಇಂದು‌ ಸಂಜೆ ಗ್ರಾಮದ ಚಂದ್ರಪ್ಪ ಎಂಬುವರ ಜಮೀನಿನಲ್ಲಿ ಇಟ್ಟಿದ್ದ ಭೂಮಿನೊಳಗೆ ಮೇಕೆ ಮರಿ ಕಟ್ಟಿ ಹಾಕಲಾಗಿತ್ತು ಅದನ್ನು ತಿನ್ನಲು ಬಂದ ಎಂಟು ತಿಂಗಳ ಮರಿ ಚಿರತೆ ಸರಿಯಾಗಿದೆ, ಸೆರೆ ಸಿಕ್ಕ ಚಿಗತೆಮರಿಯನ್ನು ರಾತ್ರಿಯೇ ಮೈಸೂರು ಅರಣ್ಯ ಭವನಕ್ಕೆ ಸಾಗಿಸಲಾಯಿತು ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ, ನಂತರ ಅರಣ್ಯ ಅಧಿಕಾರಿಗಳ ಆದೇಶದ ಮೇರೆಗೆ ಮುಂದಿನ ಕ್ರಮ ಜರಿಸಲಾಗುವುದು,

ಸ್ಥಳಕ್ಕೆ ತಿ. ನರಸೀಪುರ ವಲಯ ಅರಣಾಧಿಕಾರಿ ಸಯಿದ್ ನದೀಮ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಚಿರತೆ ಬಲೆಗೆ ಬಿದ್ದ ಸುದ್ದಿ ಹಬ್ಬುತ್ತಿದ್ದಂತೆ ಗ್ರಾಮಸ್ಥರು ರಾತ್ರಿ ವೇಳೆಯಾದರೂ ಚಿರತೆಯನ್ನು ವೀಕ್ಷಣೆ ಮಾಡಲು ಜಮಾವಣೆಗೊಂಡಿದ್ದರು.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

56 mins ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

3 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

3 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

3 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

3 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

3 hours ago